ಬೆಂಗಳೂರು : ಪರೀಕ್ಷಾ ಅಕ್ರಮ ತಡೆಯುವ ಉದ್ದೇಶದಿಂದ ಕೆಇಎ ಆದೇಶವೊಂದನ್ನು ಹೊರಡಿಸಿತ್ತು. ಅದರಲ್ಲಿ ಅನಗತ್ಯ ಕ್ಯಾಪ್ ಅಥವಾ ಸ್ಕಾರ್ಫ್ಗಳ ಮೇಲೆ ನಿಷೇಧ ಹೇರಲಾಗಿದೆ. ಅದು ಹಿಜಾಬ್ಗಳಿಗೆ ಅನ್ವಯಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ. ಸುಧಾಕರ್ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.
ಕೆಇಎಯ ಹೊರಡಿಸಿದ್ದ ವಸ್ತ್ರ ಸಂಹಿತೆ ಆದೇಶ ಆಕ್ರೋಶಕ್ಕೆ ಕಾರಣವಾಗಿತ್ತು. ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕಾರಣಿಗಳಿಂದ ಟೀಕೆಗೆ ಗುರಿಯಾಗಿತ್ತು.
ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಸುಧಾಕರ್, ”ಹಿಜಾಬ್ಗಳು ಇತರ ತಲೆ ಹೊದಿಕೆಗಳಂತೆ ಅಡ್ಡಿಯಾಗುವುದಿಲ್ಲ. ಹಿಜಾಬ್ ಧರಿಸಿ ಅಭ್ಯರ್ಥಿಗಳು ಪರೀಕ್ಷಾ ಅಕ್ರಮಕ್ಕೆ ಬ್ಲೂಟೂತ್ ಸಾಧನಗಳನ್ನು ಬಳಸಲು ಸಾಧ್ಯವಿಲ್ಲ. ಡ್ರೆಸ್ ಕೋಡ್ ನಿಯಮಗಳನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ” ಎಂದು ಹೇಳಿದ್ದಾರೆ.
”ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳು ಇರಲಿವೆ. ಹಿಜಾಬ್ ಧರಿಸಿರುವ ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ವರದಿ ಮಾಡಿಕೊಳ್ಳಬೇಕು. ಹಿಂದಿನ ವರ್ಷಗಳಲ್ಲಿ ವರದಿಯಾಗಿರುವ ವಂಚನೆ ಘಟನೆಗಳನ್ನು ತಡೆಗಟ್ಟಲು ಹೆಚ್ಚಿನ ಮೆಟಲ್ ಡಿಟೆಕ್ಟರ್ಗಳನ್ನು ಬಳಸಲಾಗುತ್ತದೆ. ಹಾಗಾಗಿ ಸಂಪೂರ್ಣ ತಪಾಸಣೆ ಇರಲಿದೆ” ಎಂದು ತಿಳಿಸಿದ್ದಾರೆ.
”ಈ ನಿಯಮಗಳು ಹೊಸದೇನಲ್ಲ. ಅವು ಮೊದಲೇ ಅಸ್ತಿತ್ವದಲ್ಲಿವೆ. ಅನಗತ್ಯ ಕ್ಯಾಪ್ ಅಥವಾ ಸ್ಕಾರ್ಫ್ಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಈ ನಿಷೇಧ ಹಿಜಾಬ್ಗೆ ಅನ್ವಯಿಸುವುದಿಲ್ಲ” ಎಂದು ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಈ ಡ್ರೆಸ್ ಕೋಡ್ ಆದೇಶದಲ್ಲಿ ಎಲ್ಲಾ ರೀತಿಯ ತಲೆ ಹೊದಿಕೆಯನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪವಿತ್ತು. ಹಾಗಾಗಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಕ್ಕುಗಳ ಬಗ್ಗೆ ಚರ್ಚೆ ಹುಟ್ಟುಹಾಕಿತ್ತು. ಇದೀಗ ಆ ಬಗ್ಗೆ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ನ.18 ಮತ್ತು 19 ರಂದು ರಾಜ್ಯಾದ್ಯಂತ ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಮುಂಚಿತವಾಗಿ ಈ ಪ್ರಕಟನೆ ಬಂದಿದೆ. ಬ್ಲೂಟೂತ್ ಸಾಧನಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸಗುವುದನ್ನು ತಡೆಯಲು ಪರೀಕ್ಷಾ ಹಾಲ್ನಲ್ಲಿ ”ತಲೆ, ಬಾಯಿ ಅಥವಾ ಕಿವಿಗಳನ್ನು ಮುಚ್ಚುವ ಯಾವುದೇ ಉಡುಪು ಅಥವಾ ಕ್ಯಾಪ್ ಧರಿಸುವುದನ್ನು ನಿಷೇಧಿಸಲಾಗುವುದು” ಎಂದು ಕೆಇಎ ಆದೇಶ ಹೊರಡಿಸಿತ್ತು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…