Featured

ಕೆಎಂಎಫ್​ನಿಂದ ಹಾಲು ಉತ್ಪಾಕರ ಬ್ಯಾಂಕ್ ತೆರೆಯಲು ಸಿಎಂ ಬೊಮ್ಮಾಯಿ ಸಲಹೆ -Vishwanews24

ಕೆಎಂಎಫ್​ನಿಂದ ಹಾಲು ಉತ್ಪಾಕರ ಬ್ಯಾಂಕ್ ತೆರೆಯಲು ಸಿಎಂ ಬಸವರಾಜ ಬೊಮ್ಮಾಯಿ ಸಲಹೆ -Vishwanews24

ಬೆಂಗಳೂರು: ರೈತ ಕುಟುಂಬ ಕೃಷಿ ಹೊರತಾಗಿ ಹೈನುಗಾರಿಕೆಯಲ್ಲಿ (Dairy Farm) ಕಾರ್ಯ ಮಾಡುತ್ತಿದ್ದಾರೆ. ಕೆಎಂಎಫ್ (KMF) ರೈತರ ಪರವಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಹಕಾರಿ ಸಂಸ್ಥೆಗಳು ಶ್ರೀಮಂತಗೊಳ್ಳಬೇಕು. ಅದರಲ್ಲಿ ಕೆಲವರು ಮಾತ್ರ ಶ್ರೀಮಂತಗೊಳ್ಳುವುದು ನಮಗೆ ಬೇಕಾಗಿಲ್ಲ. ಸಹಕಾರ ಕ್ಷೇತ್ರದ ಪ್ರತಿಯೊಬ್ಬರೂ ಆರ್ಥಿಕವಾಗಿ ಸಬಲರಾಗಬೇಕಿದೆ. ಹಾಲು ಉತ್ಪಾಕರ ಬ್ಯಾಂಕ್  ತೆರೆಯಿರಿ. ಇದು ನನ್ನ ಹಾಗೂ ಸಚಿವ ಸತೀಶ್ ಮನದಾಸೆಯಿದೆ. ಈಗಾಗಲೇ ಕೆಎಂಎಫ್ ಗೆ ಎಲ್ಲ ಅರ್ಹತೆಯಿದೆ. ಈ ಕುರಿತು ಮುಂದೆ ಕಾರ್ಯೋನ್ಮುಖರಾಗಿ. ಆಗ ಸರ್ಕಾರಕ್ಕೆ ಪದೇ ಪದೇ ಅನುದಾನ ಕೇಳುವುದು ತಪ್ಪುತ್ತದೆ. ಈ ರೀತಿ ಮಾಡಿದರೆ 100 ಕೋಟಿ ಕ್ಯಾಪಿಟಲ್ ಸರ್ಕಾರ ನೀಡಲಾಗುತ್ತದೆ ಎಂದು ಕೆಎಂಎಎಫ್​ಗೆ ಸಿಎಂ ಬಸವರಾಜ ಬೊಮ್ಮಾಯಿ  ಅವರು ಸಲಹೆ ನೀಡಿದರು.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ ವತಿಯಿಂದ ಆಯೋಜಿಸಿರುವ ಕರ್ನಾಟಕ ಹಾಲು ಮಹಾಮಂಡಳದ ಸಾಮೂಹಿಕ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ತೆರೆಯಲಾಗುವುದು. ಆರಂಭಕ್ಕೆ ಬೇಕಾದ ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗುತ್ತದೆ. ನಿರ್ವಹಣೆಯನ್ನು ಪಶುಸಂಗೋಪನೆ ಇಲಾಖೆ ನೋಡಿಕೊಳ್ಳಬೇಕು.No profit no loss ರೀತಿ ಕಾರ್ಯ ನಿರ್ವಹಿಸಬೇಕು. ಗೋಶಾಲೆ ಪುಣ್ಯದ ಕೆಲಸ ಅದನ್ನು ನಾವೆಲ್ಲ ಸೇರಿ ಮಾಡಬೇಕು. ಯಾವ ಜಿಲ್ಲೆಯಲ್ಲಿ ನೀರಾವರಿ, ಹಸಿರು ಇದೆ ಅಲ್ಲಿ ಗೋವುಗಳನ್ನು ಹೆಚ್ಚು ರೈತರಿಗೆ ನೀಡಲಾಗುವುದು. ಕೇಂದ್ರ ಹಾಗು ರಾಜ್ಯ ಸರ್ಕಾರ ಹೊಸ ಯೋಜನೆಗಳನ್ನು ಮುಂದೆ ಆರಂಭಿಸಲಾಗುವುದು ಎಂದರು.

ಇದನ್ನೂ ಓದಿ : ಖಾಸಗಿ ಎಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಇಲ್ಲ : ಸಚಿವ ಅಶ್ವತ್ಥನಾರಾಯಣ -Vishwanews24

ಹಾಲಿನ ದರ ಹೆಚ್ಚಳ ಮಾಡುವ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಈ ಕುರಿತು ನಾನು ಯಾವುದೇ ಆಶ್ವಾಸನೆ ಕೊಡುವುದಿಲ್ಲ. ಕೊಡಲು ಬರುವುದಿಲ್ಲ. ನಾಯಕರಾದ ಯಡಿಯೂರಪ್ಪ ಪ್ರೋತ್ಸಾಹ ಧನ ನೀಡಿದ್ದರು. ಕೋವಿಡ್ ಸಂದರ್ಭದಲ್ಲಿ 1250 ಕೋಟಿ ಸಹಾಯ ಮಾಡಲಾಗಿದೆ. ಇದಕ್ಕೆ ಬಿಎಸ್ ವೈ ಗೆ ಅಭಾರಿಯಾಗಿದ್ದೇನೆ. ಬಿಎಸ್ ವೈ ಅವರ ಯೋಜನೆ ಮುಂದುವರೆಸಲಾಗುವುದು. ಕೆಎಂಎಫ್ ಗೆ ಈ ವರ್ಷ 50 ಕೋಟಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಹೇಳಿದರು.

Vishwa News 24

Recent Posts

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

34 minutes ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

38 minutes ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

1 hour ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

1 hour ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

1 hour ago

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ – vishwanews24

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನವನ್ನು ಸರ್ಕಾರಿ ರಜಾದಿನವಾಗಿ ಘೋಷಿಸುವಂತೆ…

2 hours ago