ಕೆಎಂಎಫ್ ನಿರ್ದೇಶಕ ಕಾಪು ದಿವಾಕರ ಶೆಟ್ಟಿಗೆ ಮುಡಿಗೇರಲಿದೆ ಆರ್ಯಭಟ ಅಂತರಾಷ್ಟೀಯ ಪ್ರಶಸ್ತಿ:vishwanews24
ಕೆಎಂಎಫ್ ನಿರ್ದೇಶಕ ಕಾಪು ದಿವಾಕರ ಶೆಟ್ಟಿಗೆ ಮುಡಿಗೇರಲಿದೆ ಆರ್ಯಭಟ ಅಂತರಾಷ್ಟೀಯ ಪ್ರಶಸ್ತಿ:vishwanews24

ಕಾಪು: 2020 22- ನೇ ಸಾಲಿನಲ್ಲಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕೆಎಂಎಫ್ ಆಡಳಿತ ಮಂಡಳಿ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 25ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸುದೀರ್ಘ ಅವಧಿಯಲ್ಲಿ ಕಾಪು ದಿವಾಕರ ಶೆಟ್ಟಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ
19 81ರಲ್ಲಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ ಸೇವೆ ಯನ್ನು ಆರಂಭಿಸಿದವರು 1995 ರಲ್ಲಿ ಕೇಂದ್ರ ಸರಕಾರದ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ 2004ರಲ್ಲಿ ಹಾಗೂ 2019 ರಿಂದ ಆಡಳಿತ ಮಂಡಳಿ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆಯನ್ನು ಮುಂದುವರಿಸುತ್ತಿದ್ದಾರೆ.

ಇವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು 2004ರಲ್ಲಿ “ಅತ್ಯುತ್ತಮ ಸಹಕಾರಿ ಸಂಘ” ಪ್ರಶಸ್ತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ “ಅತ್ಯುತ್ತಮ ಹೈನುಗಾರ ಪ್ರಶಸ್ತಿ 2009” ಗೌರವಿಸಲಾಗಿತ್ತು.
