ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧ ದಾಖಲಿಸಿದ್ದ ಪೋಕ್ಸೋ ಕೇಸ್ ಅನ್ನು ಬಾಲಕಿಯ ಪೋಷಕರು ವಾಪಸ್ ಪಡೆಯುತ್ತಿದ್ದಾರೆ.
ಈ ಕುರಿತು ಬಾಲಕಿ ಪೋಷಕರು ವಿಡಿಯೋ ಹೇಳಿಕ ಬಿಡುಗಡೆ ಮಾಡಿ ಸ್ಪಷ್ಟಪಡಿಸಿದ್ದಾರೆ. ಈ ವಿಡಿಯೋದಲ್ಲಿ ಮಾತನಾಡಿರುವ ಅಪ್ರಾಪ್ತೆಯ ಪೋಷಕರು, ಬೆಳಗಾವಿಯಿಂದ ಬಾಳೇಕುಂದ್ರಿಗೆ ನಮ್ಮ ಮಗಳು ಬರುತ್ತಿದ್ದಳು. ಟಿಕೆಟ್ ಪಡೆಯುವ ಸಂಬಂಧ ಆಗಿರುವ ಜಗಳ ಇದು. ನಾವೂ ಕನ್ನಡದ ಅಭಿಮಾನಿಗಳು, ನಮ್ಮಲ್ಲಿ ಜಾತಿ ಭೇದ ಭಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ. ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಸ್ವಇಚ್ಛೆಯಿಂದ ಪ್ರಕರಣ ವಾಪಸ್ ಪಡೆಯುತ್ತಿದ್ದೇವೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಬಾಲಕಿಯ ಪೋಷಕರು ಸ್ಪಷ್ಟನೆ ನೀಡಿದ್ದಾರೆ
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…