ಉಡುಪಿ: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಡಿ ಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ನವೆಂಬರ್ 29 ರಂದು ಆಗಮಿಸಲಿದ್ದು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗಳಿಗೆ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಅವರು ಶನಿವಾರ ಉಡುಪಿ ಪುಸ್ ಕೂಬ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನವೆಂಬರ್ 28ರಂದು ಸಂಜೆ 8 ಗಂಟೆಗೆ ಉತ್ತರಕನ್ನಡ ಜಿಲ್ಲಾ ಪ್ರವಾಸ ಮುಗಿಸಿ ಉಡುಪಿ ಜಿಲ್ಲಾ ಗಡಿಯಾದ ಶಿರೂರಿಗೆ ಆಗಮಿಸಲಿದ್ದು ಪಕ್ಷದ ವತಿಯಿಂದ ಸ್ವಾಗತಿಸಲಾಗುವುದು. ಬಳಿಕ ಅವರು ಕಮಲ ಶಿಲೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನವಂಬರ್ 29 ರ ಬೆಳಿಗ್ಗೆ ಕೊಲ್ಲೂರು ಮೂಕಾಂಬಿಕ ದೇವಸ್ತಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಉಡುಪಿಗೆ ಆಗಮಿಸಲಿದ್ದು, ಉಡುಪಿ ಬಾಸೆಲ್ ಮಿಷನರಿಸ್ ಆಡಿಟೋರಿಯಂ ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಡಾ ಪುಷ್ಪಾ ಅಮರನಾಥ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು ಆರ್ ಸಭಾಪತಿ, ಕಿಸಾನ್ ಘಟಕದ ಸಚಿನ್ ಮಿಗಾ ಹಾಗೂ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದರು. ಕಾರ್ಯಕರ್ತರ ಸಮಾವೇಶಕ್ಕೆ ಪ್ರತಿ ಬ್ಯಾಕ್ ನಿಂದ ಆಯ್ದ ಕಾರ್ಯಕರ್ತರು ಭಾಗವಹಿಸಲಿದ್ದು, ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ನಾಯಕರುಗಳಾದ ಪ್ರಶಾಂತ್ ಜತ್ತನ್ನ ಕೀರ್ತಿ ಶೆಟ್ಟಿ, ಅಣ್ಣಯ್ಯ ಶೇರಿಗಾರ್ ಹಾಗೂ ಇತರರು ಉಪಸ್ತಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…