ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ವಿಧಾನಪರಿಷತ್ ಸದಸ್ಯ, ಬಿ.ಕೆ ಹರಿಪ್ರಸಾದ್ಗೆ ಸಿಎಂ ಶಾಕ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಕಾಂಗ್ರೆಸ್ಗೆ ಪುನರ್ ರಚನೆಗೆ ವರಿಷ್ಠರು ಮುಂದಾಗಿದ್ದು, ಕೆಪಿಸಿಸಿಗೆ ನೂತನ ಕಾರ್ಯಾಧ್ಯಕ್ಷರು ಸೇರಿದಂತೆ ಹೊಸದಾಗಿ ಪದಾಧಿಕಾರಿಗಳನ್ನು ನೇಮಕ ಮಾಡಲು ಮುಂದಾಗಿದ್ದಾರೆ.
ಈ ನಡುವೆ ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿನಯ್ ಕುಮಾರ್ ಸೊರಕೆಯನ್ನು ಆಯ್ಕೆ ಮಾಡಿ ಹರಿಪ್ರಸಾದ್ ಅವರ ಮಹತ್ವ ಕಡಿಮೆ ಮಾಡಲು ಪ್ಲಾನ್ ಮಾಡಲಾಗಿದೆ ಎನ್ನಲಾಗಿದೆ. ಸೊರಕೆ ಬಿಲ್ಲವ ಸಮಾಜದವರಾಗಿದ್ದು, ಕರಾವಳಿಯವರಾಗಿದ್ದಾರೆ. ದೆಹಲಿ ಮಟ್ಟದಲ್ಲೂ ಸೊರಕೆ ಉತ್ತಮ ಸಂಪರ್ಕವನ್ನು ಹೊಂದಿರುವುದರಿಂದ ಹರಿಪ್ರಸಾದ್ ಅವರಿಗೆ ಇದು ಹಿನ್ನಡೆಯಾಗಲಿದೆ ಅನ್ನುವುದು ಸಿದ್ದು ಟೀಂ ಲೆಕ್ಕಾಚಾರವಾಗಿದೆ.
ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ರಾಮಲಿಂಗಾ ರೆಡ್ಡಿ ಅವರು ಈಗಾಗಲೇ ಸಚಿವ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಕಾರ್ಯಾಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸಿ ಮಂತ್ರಿ ಸ್ಥಾನದ ಸಮರ್ಥ ನಿರ್ವಹಣೆಗೆ ಅವಕಾಶ ಮಾಡಿಕೊಡುವ ಸಾಧ್ಯತೆಗಳಿವೆ.
ವಿವಿಧ ಜಾತಿ, ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿನಯ್ ಕುಲಕರ್ಣಿ, ಅಂಜಲಿ ನಿಂಬಾಳ್ಕರ್, ಜೆ.ಸಿ. ಚಂದ್ರಶೇಖರ್, ವಿನಯ್ ಕುಮಾರ್ ಸೊರಕೆ, ವಸಂತಕುಮಾರ್ ನೇಮಕ ಮಾಡುವ ಸಾಧ್ಯತೆಗಳು ಹೆಚ್ಚಿದ್ದು , ಈ ಲೆಕ್ಕಚಾರದ ನಡುವೆ ಸಿದ್ದು ಟೀಂ ತಮ್ಮ ತಂತ್ರ ಹೂಡುತ್ತಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…