Featured

ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ ; ಆರೋಪಿಯ ಬಂಧನ – vishwanews24

ಕಾಫಿ ಶಾಪ್’ಗಳಲ್ಲಿ ವಾಶ್ ರೂಮ್ ಬಳಸುವ ಹೆಣ್ಣು ಮಕ್ಕಳೇ ಹುಷಾರ್ ..!

ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ ..

ಬೆಂಗಳೂರು:  ನಗರದ ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆಯಾಗಿದ್ದು, ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿದ್ದ ಆರೋಪಿಯ ಬಂಧನವಾಗಿದೆ.

ಬಂಧಿತ ಆರೋಪಿಯನ್ನು ಭದ್ರಾವತಿಯ ಮನೋಜ್ ಎಂದು ಗುರ್ತಿಸಲಾಗಿದೆ. ಈತ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಥರ್ಡ್ ವೇವ್ ಕಾಫಿ ಔಟ್‌ಲೆಟ್‌ನಲ್ಲಿ ಕಳೆದ ಆರು ತಿಂಗಳಿನಿಂದ ಕೆಲಸ ಮಾಡುತ್ತಿದ್ದ.

ಯುವತಿಯೊಬ್ಬಳು ಥರ್ಡ್ ವೇವ್ ಕಾಫಿ ಔಟ್‌ಲೆಟ್‌ಗೆ ಹೋಗಿದ್ದು, ಕಾಫಿ ಆರ್ಡರ್ ಮಾಡಿದ್ದಾಳೆ. ಬಳಿಕ ಅಲ್ಲಿನ ವಾಶ್ ರೂಮ್ ಬಳಸಲು ತೆರಳಿದಾಗ ಡಸ್ಟ್‌ಬಿನ್‌ನಲ್ಲಿ ಹಿಡೆನ್ ಕ್ಯಾಮೆರಾ ಇರುವುದು ಪತ್ತೆಯಾಗಿದೆ.ಮೊಬೈಲ್ ನಲ್ಲಿ ಕ್ಯಾಮೆರಾ ಆನ್ ಮಾಡಿ ರೆಕಾರ್ಡಿಂಗ್ ಗೆ ಇಡಲಾಗಿದ್ದು, ಫೋನ್ ಅಥವಾ ಯಾವುದೇ ಸಂದೇಶಗಳು ಬರುವುದನ್ನು ತಡೆಯಲು ಫ್ಲೈಟ್ ಮೋಡ್’ಗೆ ಹಾಕಲಾಗಿದೆ. ಡಸ್ಟ್ ಬಿನ್ ನ್ನು ಟಾಯ್ಲೆಟ್ ಸೀಟಿಗೆ ಎದುರಾಗಿ ಇರಿಸಲಾಗಿದೆ. ಇದರ ವಿಡಿಯೋವನ್ನು ಯುವತಿ ತನ್ನ ಫೋನ್ ನಲ್ಲಿ ಸೆರೆ ಹಿಡಿದುಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಇದರ ಬೆನ್ನಲ್ಲೇ ಫೋನ್ ಕೆಫೆಯಲ್ಲಿ ಕೆಲಸ ಮಾಡುವ ವ್ಯಕ್ತಿಗಳಲ್ಲಿ ಒಬ್ಬರಿಗೆ ಸೇರಿದ್ದು ಎಂಬುದು ತಿಳಿದುಬಂದಿದೆ. ಬಳಿಕ ಆತನನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಈ ವಿಚಾರ ಎಲ್ಲೆಡೆ ಹರಡುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಪೊಲೀಸರು ಆರೋಪಿಯನ್ನು ಬಧನಕ್ಕೊಳಪಡಿಸಿದ್ದಾರೆ. ಈ ಸಂಬಂಧ ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

4 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

21 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

22 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago