ಕಾರವಾರ : ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಹಿಂದೆ ರಾಜಕೀಯ ಪಕ್ಷದ ಸಂಚು ಇರಬಹುದು. ಇದು ಚುನಾವಣೆಗಾಗಿ ಬಿಜೆಪಿಯವರೆ ಮಾಡಿರುವ ಸಂಚು ಎಂಬ ಸಂಶಯ ಇದೆ ಎಂದು ಸಚಿವ ಮಂಕಾಳು ವೈದ್ಯ ಬಿಜೆಪಿ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.
ಮುಂಡಗೋಡದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವ ಮಂಕಾಳು ವೈದ್ಯ ಚುನಾವಣೆಗಾಗಿ ಬಿಜೆಪಿಯವರು ಏನ್ ಬೇಕಾದ್ರೂ ಮಾಡ್ತಾರೆ. ಚುನಾವಣೆ ಹೊತ್ತಲ್ಲಿ ಮತದಾರರ ಗಮನ ಸೆಳೆಯಲು ಈ ಸಂಚು ಮಾಡಲಾಗಿದೆ. ಇದನ್ನ ಯಾರು, ಯಾವ ಪಕ್ಷದವರು ಮಾಡ್ತಾರೆ ಅಂತಾ ಎಲ್ಲರಿಗೂ ಗೊತ್ತಿದೆ.ಯಾರೂ ಭಯ ಪಡುವ ಅಗತ್ಯವಿಲ್ಲ.ಈ ಕೃತ್ಯ ಯಾರೇ ಮಾಡಿದ್ದರು ನಮ್ಮ ಸರ್ಕಾರ ಖಂಡಿತವಾಗಿ ಕಠಿಣ ಕ್ರಮ ಜರುಗಿಸುತ್ತದೆ ಎಂದರು. ಬಿಜೆಪಿಯವರು ಇದುವರೆಗೆ ಯಾವ ಚುನಾವಣೆಯಲ್ಲಿ ಅಭಿವೃದ್ಧಿ ಪರವಾಗಿ ಮಾತಾನಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.
ಬಿಜೆಪಿಯವರು ಬಡವರ ಪರವಾಗಿ ಯಾವ ಕಾರ್ಯಕ್ರಮ ನೀಡಿ ಚುನಾವಣೆ ಎದುರಿಸಿದ್ದಾರಾ ? ಅವರು ಇದುವರೆಗೂ ಧರ್ಮ ಮತ್ತು ಮನುಷ್ಯರ ನಡುವೆ ದ್ವೇಷ ಬಿತ್ತಿ ಚುನಾವಣೆ ಎದುರಿಸಿಕೊಂಡು ಬಂದಿದ್ದಾರೆ. ಈ ಬಾರಿ ಸಹ ಅದನ್ನೇ ಮಾಡತ್ತಿದ್ದಾರೆಂದು ಸಚಿವ ಮಂಕಾಳು ವೈದ್ಯ ಆರೋಪಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…