ಕಲಬುರಗಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ನಾವು ಹೇಳಿದ್ರೆ ಜನ, ವಿರೋಧ ಪಕ್ಷದವರು ಹೇಳುತ್ತಾರೆ ಅಂತಾರೆ. ಕೆಲವು ಜನ ಇಂಥಹ ವಿಕೃತ ಮನಸ್ಸಿನವರಿದ್ದಾರೆ ಅವರು 100 ರೂ. ಆಗಲಿ ಪರವಾಗಿಲ್ಲ ಎನ್ನುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಕಾಲದಲ್ಲಿ 60 ರೂಪಾಯಿಗೆ ಪೆಟ್ರೋಲ್ ದೊರಕುತಿತ್ತು. ಇದೀಗ ನೂರರ ಗಡಿ ದಾಟಿದವರು ಕೇಂದ್ರ ಸರ್ಕಾರದ ವಿರುದ್ಧ ಯಾರು ಕೂಡ ಪ್ರಶ್ನೆ ಮಾಡುತ್ತಿಲ್ಲ. ಕಚ್ಚಾ ತೈಲ ಬೆಲೆ ಕಡಿಮೆ ಇದ್ದರು, ದೇಶದಲ್ಲಿ ಪೆಟ್ರೋಲ್ ಡೀಸೆಲ್ ನೂರರ ಗಡಿ ದಾಟಿದೆ. ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಹೀಗಾಗಿ ಜನ ಸಾಮಾನ್ಯರಿಗೆ ಹೊರೆಯಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ಬಗ್ಗೆ ಮಾತನಾಡಿ, ಜೆಡಿಎಸ್ ಮೊದಲ ಬಾರಿಗೆ ಎರಡು ಕಡೆ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಿದ್ದಾರೆ. ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ರೆ ಕಾಂಗ್ರೆಸ್ ಗೆ ಹಿನ್ನಡೆ ಎಂದು ತಿಳಿದುಕೊಂಡರೆ ಅದು ತಪ್ಪು ಕಲ್ಪನೆ. ಜನ ಈಗ ಜಾಗೃತರಾಗಿದ್ದಾರೆ ಜಾತ್ಯಾತೀತ ತತ್ವದ ಮೇಲೆ ಕಾಂಗ್ರೆಸ್ ನಡೆಯುತ್ತದೆ. ಹಾಗಾಗಿ ಈ ಎರಡು ಕ್ಷೇತ್ರದಲ್ಲಿ ಜನ ಕಾಂಗ್ರೆಸ್ಗೆ ಆಶೀರ್ವಾದ ಮಾಡುತ್ತಾರೆ. ಸಂವಿಧಾನ ಉಳಿಸಬೇಕು, ಜಾತ್ಯಾತೀತ ಇರಬೇಕು, ಬಿಜೆಪಿಗೆ ಪಾಠ ಕಲಿಸಬೇಕು ಎಂದು ಕೆಂಡಕಾರಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…