ಕಲಬುರಗಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ನಾವು ಹೇಳಿದ್ರೆ ಜನ, ವಿರೋಧ ಪಕ್ಷದವರು ಹೇಳುತ್ತಾರೆ ಅಂತಾರೆ. ಕೆಲವು ಜನ ಇಂಥಹ ವಿಕೃತ ಮನಸ್ಸಿನವರಿದ್ದಾರೆ ಅವರು 100 ರೂ. ಆಗಲಿ ಪರವಾಗಿಲ್ಲ ಎನ್ನುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಕಾಲದಲ್ಲಿ 60 ರೂಪಾಯಿಗೆ ಪೆಟ್ರೋಲ್ ದೊರಕುತಿತ್ತು. ಇದೀಗ ನೂರರ ಗಡಿ ದಾಟಿದವರು ಕೇಂದ್ರ ಸರ್ಕಾರದ ವಿರುದ್ಧ ಯಾರು ಕೂಡ ಪ್ರಶ್ನೆ ಮಾಡುತ್ತಿಲ್ಲ. ಕಚ್ಚಾ ತೈಲ ಬೆಲೆ ಕಡಿಮೆ ಇದ್ದರು, ದೇಶದಲ್ಲಿ ಪೆಟ್ರೋಲ್ ಡೀಸೆಲ್ ನೂರರ ಗಡಿ ದಾಟಿದೆ. ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಹೀಗಾಗಿ ಜನ ಸಾಮಾನ್ಯರಿಗೆ ಹೊರೆಯಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ಬಗ್ಗೆ ಮಾತನಾಡಿ, ಜೆಡಿಎಸ್ ಮೊದಲ ಬಾರಿಗೆ ಎರಡು ಕಡೆ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಿದ್ದಾರೆ. ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ರೆ ಕಾಂಗ್ರೆಸ್ ಗೆ ಹಿನ್ನಡೆ ಎಂದು ತಿಳಿದುಕೊಂಡರೆ ಅದು ತಪ್ಪು ಕಲ್ಪನೆ. ಜನ ಈಗ ಜಾಗೃತರಾಗಿದ್ದಾರೆ ಜಾತ್ಯಾತೀತ ತತ್ವದ ಮೇಲೆ ಕಾಂಗ್ರೆಸ್ ನಡೆಯುತ್ತದೆ. ಹಾಗಾಗಿ ಈ ಎರಡು ಕ್ಷೇತ್ರದಲ್ಲಿ ಜನ ಕಾಂಗ್ರೆಸ್ಗೆ ಆಶೀರ್ವಾದ ಮಾಡುತ್ತಾರೆ. ಸಂವಿಧಾನ ಉಳಿಸಬೇಕು, ಜಾತ್ಯಾತೀತ ಇರಬೇಕು, ಬಿಜೆಪಿಗೆ ಪಾಠ ಕಲಿಸಬೇಕು ಎಂದು ಕೆಂಡಕಾರಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…