Featured

ಕೊರೊನಾ ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ -Vishwanews24

ಕೊರೊನಾ ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ -Vishwanews24

ನವದೆಹಲಿ: ದೇಶದಲ್ಲಿ ಕೊರೊನಾ ವ್ಯಾಪಿಸುವಿಕೆ ತೀವ್ರಗೊಂಡಿದ್ದು, ಇದೇ ಮೊದಲ ಬಾರಿಗೆ ಒಂದೇ ದಿನ ದಾಖಲೆಯ 90,632 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಭಾರತವು ಬ್ರೆಜಿಲ್‌ ಅನ್ನೂ ಹಿಂದಿಕ್ಕಿ, ಜಗತ್ತಿನ ಹಾಟ್‌ ಸ್ಪಾಟ್‌ ದೇಶಗಳ ಪೈಕಿ ಎರಡನೇ ಸ್ಥಾನಕ್ಕೇರಿದೆ.

ಬ್ರೆಜಿಲ್‌ನಲ್ಲಿ ಭಾನುವಾರ ಕೋವಿಡ್ ದೃಢಪಟ್ಟವರ ಸಂಖ್ಯೆ 41.23 ಲಕ್ಷ ದಾಟಿದರೆ, ಭಾರತದ ಸೋಂಕಿತರ ಒಟ್ಟಾರೆ ಸಂಖ್ಯೆ 41.60 ಲಕ್ಷ ಮೀರಿದೆ. ಅಲ್ಲದೆ, 24 ಗಂಟೆಗಳಲ್ಲಿ 90 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆಯಾದ ಮೊದಲ ದೇಶ ಎಂಬ ಕುಖ್ಯಾತಿಗೂ ಭಾರತ ಪಾತ್ರವಾಗಿದೆ. 64.35 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕ ಜಗತ್ತಿನಲ್ಲೇ ಅತಿ ಹೆಚ್ಚು ಪ್ರಕರಣಗಳಿರುವ ದೇಶವಾಗಿದೆ.

ಶನಿವಾರ ಬೆಳಗ್ಗೆ 8ರಿಂದ ಸೋಮವಾರ ಬೆಳಗ್ಗೆ 8ರವರೆಗೆ 1,065 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದೇ ವೇಳೆ, ಈವರೆಗೆ 32 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಗುಣಮುಖ ಪ್ರಮಾಣ ಶೇ.77.32ಕ್ಕೇರಿಕೆಯಾಗಿದೆ. ಅಲ್ಲದೆ, ಒಂದೇ ದಿನದಲ್ಲಿ ದಾಖಲೆಯ 70 ಸಾವಿರಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

2020ರ ಜ.30ರಂದು ದೇಶದಲ್ಲಿ ಮೊದಲ ಕೇಸು ದಾಖಲಾಗಿತ್ತು. ಆಗ ವಿಶ್ವದಲ್ಲಿಯೇ ಅತೀ ಹೆಚ್ಚು ಸೋಂಕಿತರು ಇರುವ ದೇಶಗಳ ಪಟ್ಟಿಯಲ್ಲಿ ಭಾರತದ ಸ್ಥಾನ 50ಕ್ಕಿಂತ ಮೇಲಕ್ಕಿತ್ತು. ಆದರೆ, ನಂತರದಲ್ಲಿ ವಿದೇಶದಿಂದ ಬಂದವರ ಮೂಲಕ ಮತ್ತು ಸ್ಥಳೀಯವಾಗಿ ಹಬ್ಬಿದ ಪ್ರಕರಣಗಳು, ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಲು ಕಾರಣವಾಯಿತು. ಜೊತೆಗೆ ಪ್ರಸಕ್ತ ನಿತ್ಯವೂ 11ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂತು ಪತ್ತೆ ನಡೆಸುತ್ತಿರುವುದು ಕೂಡ ದಾಖಲೆ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗಲು ಕಾರಣವಾಗಿದೆ.

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago