Featured

ಕೊರೊನಾ ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ -Vishwanews24

ಕೊರೊನಾ ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ -Vishwanews24

ನವದೆಹಲಿ: ದೇಶದಲ್ಲಿ ಕೊರೊನಾ ವ್ಯಾಪಿಸುವಿಕೆ ತೀವ್ರಗೊಂಡಿದ್ದು, ಇದೇ ಮೊದಲ ಬಾರಿಗೆ ಒಂದೇ ದಿನ ದಾಖಲೆಯ 90,632 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಭಾರತವು ಬ್ರೆಜಿಲ್‌ ಅನ್ನೂ ಹಿಂದಿಕ್ಕಿ, ಜಗತ್ತಿನ ಹಾಟ್‌ ಸ್ಪಾಟ್‌ ದೇಶಗಳ ಪೈಕಿ ಎರಡನೇ ಸ್ಥಾನಕ್ಕೇರಿದೆ.

ಬ್ರೆಜಿಲ್‌ನಲ್ಲಿ ಭಾನುವಾರ ಕೋವಿಡ್ ದೃಢಪಟ್ಟವರ ಸಂಖ್ಯೆ 41.23 ಲಕ್ಷ ದಾಟಿದರೆ, ಭಾರತದ ಸೋಂಕಿತರ ಒಟ್ಟಾರೆ ಸಂಖ್ಯೆ 41.60 ಲಕ್ಷ ಮೀರಿದೆ. ಅಲ್ಲದೆ, 24 ಗಂಟೆಗಳಲ್ಲಿ 90 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆಯಾದ ಮೊದಲ ದೇಶ ಎಂಬ ಕುಖ್ಯಾತಿಗೂ ಭಾರತ ಪಾತ್ರವಾಗಿದೆ. 64.35 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕ ಜಗತ್ತಿನಲ್ಲೇ ಅತಿ ಹೆಚ್ಚು ಪ್ರಕರಣಗಳಿರುವ ದೇಶವಾಗಿದೆ.

ಶನಿವಾರ ಬೆಳಗ್ಗೆ 8ರಿಂದ ಸೋಮವಾರ ಬೆಳಗ್ಗೆ 8ರವರೆಗೆ 1,065 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದೇ ವೇಳೆ, ಈವರೆಗೆ 32 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಗುಣಮುಖ ಪ್ರಮಾಣ ಶೇ.77.32ಕ್ಕೇರಿಕೆಯಾಗಿದೆ. ಅಲ್ಲದೆ, ಒಂದೇ ದಿನದಲ್ಲಿ ದಾಖಲೆಯ 70 ಸಾವಿರಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

2020ರ ಜ.30ರಂದು ದೇಶದಲ್ಲಿ ಮೊದಲ ಕೇಸು ದಾಖಲಾಗಿತ್ತು. ಆಗ ವಿಶ್ವದಲ್ಲಿಯೇ ಅತೀ ಹೆಚ್ಚು ಸೋಂಕಿತರು ಇರುವ ದೇಶಗಳ ಪಟ್ಟಿಯಲ್ಲಿ ಭಾರತದ ಸ್ಥಾನ 50ಕ್ಕಿಂತ ಮೇಲಕ್ಕಿತ್ತು. ಆದರೆ, ನಂತರದಲ್ಲಿ ವಿದೇಶದಿಂದ ಬಂದವರ ಮೂಲಕ ಮತ್ತು ಸ್ಥಳೀಯವಾಗಿ ಹಬ್ಬಿದ ಪ್ರಕರಣಗಳು, ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಲು ಕಾರಣವಾಯಿತು. ಜೊತೆಗೆ ಪ್ರಸಕ್ತ ನಿತ್ಯವೂ 11ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂತು ಪತ್ತೆ ನಡೆಸುತ್ತಿರುವುದು ಕೂಡ ದಾಖಲೆ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗಲು ಕಾರಣವಾಗಿದೆ.

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago