Featured

ಕೊರೊನಾ ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ -Vishwanews24

ಕೊರೊನಾ ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ -Vishwanews24

ನವದೆಹಲಿ: ದೇಶದಲ್ಲಿ ಕೊರೊನಾ ವ್ಯಾಪಿಸುವಿಕೆ ತೀವ್ರಗೊಂಡಿದ್ದು, ಇದೇ ಮೊದಲ ಬಾರಿಗೆ ಒಂದೇ ದಿನ ದಾಖಲೆಯ 90,632 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಭಾರತವು ಬ್ರೆಜಿಲ್‌ ಅನ್ನೂ ಹಿಂದಿಕ್ಕಿ, ಜಗತ್ತಿನ ಹಾಟ್‌ ಸ್ಪಾಟ್‌ ದೇಶಗಳ ಪೈಕಿ ಎರಡನೇ ಸ್ಥಾನಕ್ಕೇರಿದೆ.

ಬ್ರೆಜಿಲ್‌ನಲ್ಲಿ ಭಾನುವಾರ ಕೋವಿಡ್ ದೃಢಪಟ್ಟವರ ಸಂಖ್ಯೆ 41.23 ಲಕ್ಷ ದಾಟಿದರೆ, ಭಾರತದ ಸೋಂಕಿತರ ಒಟ್ಟಾರೆ ಸಂಖ್ಯೆ 41.60 ಲಕ್ಷ ಮೀರಿದೆ. ಅಲ್ಲದೆ, 24 ಗಂಟೆಗಳಲ್ಲಿ 90 ಸಾವಿರಕ್ಕೂ ಅಧಿಕ ಪ್ರಕರಣ ಪತ್ತೆಯಾದ ಮೊದಲ ದೇಶ ಎಂಬ ಕುಖ್ಯಾತಿಗೂ ಭಾರತ ಪಾತ್ರವಾಗಿದೆ. 64.35 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕ ಜಗತ್ತಿನಲ್ಲೇ ಅತಿ ಹೆಚ್ಚು ಪ್ರಕರಣಗಳಿರುವ ದೇಶವಾಗಿದೆ.

ಶನಿವಾರ ಬೆಳಗ್ಗೆ 8ರಿಂದ ಸೋಮವಾರ ಬೆಳಗ್ಗೆ 8ರವರೆಗೆ 1,065 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದೇ ವೇಳೆ, ಈವರೆಗೆ 32 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಗುಣಮುಖ ಪ್ರಮಾಣ ಶೇ.77.32ಕ್ಕೇರಿಕೆಯಾಗಿದೆ. ಅಲ್ಲದೆ, ಒಂದೇ ದಿನದಲ್ಲಿ ದಾಖಲೆಯ 70 ಸಾವಿರಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

2020ರ ಜ.30ರಂದು ದೇಶದಲ್ಲಿ ಮೊದಲ ಕೇಸು ದಾಖಲಾಗಿತ್ತು. ಆಗ ವಿಶ್ವದಲ್ಲಿಯೇ ಅತೀ ಹೆಚ್ಚು ಸೋಂಕಿತರು ಇರುವ ದೇಶಗಳ ಪಟ್ಟಿಯಲ್ಲಿ ಭಾರತದ ಸ್ಥಾನ 50ಕ್ಕಿಂತ ಮೇಲಕ್ಕಿತ್ತು. ಆದರೆ, ನಂತರದಲ್ಲಿ ವಿದೇಶದಿಂದ ಬಂದವರ ಮೂಲಕ ಮತ್ತು ಸ್ಥಳೀಯವಾಗಿ ಹಬ್ಬಿದ ಪ್ರಕರಣಗಳು, ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಲು ಕಾರಣವಾಯಿತು. ಜೊತೆಗೆ ಪ್ರಸಕ್ತ ನಿತ್ಯವೂ 11ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂತು ಪತ್ತೆ ನಡೆಸುತ್ತಿರುವುದು ಕೂಡ ದಾಖಲೆ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗಲು ಕಾರಣವಾಗಿದೆ.

 

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago