ಕೊಲ್ಲೂರು: ಇಲ್ಲಿನ ಪ್ರಸಿದ್ಧ ಕ್ಷೇತ್ರ ಶ್ರೀ ಮೂಕಾಂಬಿಕಾ ದೇಗುಲಕ್ಕೆ ದರ್ಶನಕ್ಕೆ ಆಗಮಿಸಿದ್ದ ಮಹಿಳೆ ನದಿಯಲ್ಲಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸೆ. 10ರಂದು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿದ್ದ ತಿರುವನಂತಪುರದ ಮುರುಗನ್ ಅವರ ಪತ್ನಿ ಶಾಂತಿ ಶೇಖರನ್(42) ಅವರ ಮೃತದೇಹ ಸೆ. 11ರ ಸಂಜೆ ಅನತಿ ದೂರದಲ್ಲಿ ಪತ್ತೆಯಾಗಿದೆ.
ತಿರುವನಂತಪುರದಿಂದ ಕೊಲ್ಲೂರು ಕ್ಷೇತ್ರ ದರ್ಶನಕ್ಕೆ 14 ಮಂದಿಯ ತಂಡ ಆಗಮಿಸಿತ್ತು. ಅವರು ಸೌಪರ್ಣಿಕಾ ಸ್ನಾನಘಟ್ಟಕ್ಕೆ ತೆರಳಿ ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಶಾಂತಿ ಶೇಖರನ್ ಅವರು ಪುತ್ರ ಆದಿತ್ಯ ನದಿಯ ಸೆಳೆತಕ್ಕೆ ಒಳಗಾಗಿ ನೀರು ಪಾಲಾಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ನೀರಿಗೆ ಧುಮುಕಿದ್ದರು. ಆಕೆಯ ಪತಿ ಮುರುಗನ್ ಕೂಡ ಪುತ್ರನನ್ನು ಕಾಪಾಡಲು ನೀರಿಗೆ ಹಾರಿದ್ದರು. ಆದಿತ್ಯ ಹಾಗೂ ಮುರುಗನ್ ಈಜಿ ದಡ ಸೇರಿದರೆ ಶಾಂತಿ ಶೇಖರನ್ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಕೊಚ್ಚಿ ಹೋಗಿದ್ದರು.
ಅಗ್ನಿಶಾಮಕ ದಳ, ಕೊಲ್ಲೂರು ಪೊಲೀಸರು ಹಾಗೂ ಈಶ್ವರ ಮಲ್ಪೆ ತಂಡದವರು ಶೋಧ ಕಾರ್ಯ ನಡೆಸಿದ್ದು, ರವಿವಾರ ಸಂಜೆ ಸೌಪರ್ಣಿಕಾ ನದಿಯ 1 ಕಿ.ಮೀ. ದೂರ ವ್ಯಾಪ್ತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…