ಕೊಲ್ಲೂರು: ಇಲ್ಲಿನ ಪ್ರಸಿದ್ಧ ಕ್ಷೇತ್ರ ಶ್ರೀ ಮೂಕಾಂಬಿಕಾ ದೇಗುಲಕ್ಕೆ ದರ್ಶನಕ್ಕೆ ಆಗಮಿಸಿದ್ದ ಮಹಿಳೆ ನದಿಯಲ್ಲಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸೆ. 10ರಂದು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿದ್ದ ತಿರುವನಂತಪುರದ ಮುರುಗನ್ ಅವರ ಪತ್ನಿ ಶಾಂತಿ ಶೇಖರನ್(42) ಅವರ ಮೃತದೇಹ ಸೆ. 11ರ ಸಂಜೆ ಅನತಿ ದೂರದಲ್ಲಿ ಪತ್ತೆಯಾಗಿದೆ.
ತಿರುವನಂತಪುರದಿಂದ ಕೊಲ್ಲೂರು ಕ್ಷೇತ್ರ ದರ್ಶನಕ್ಕೆ 14 ಮಂದಿಯ ತಂಡ ಆಗಮಿಸಿತ್ತು. ಅವರು ಸೌಪರ್ಣಿಕಾ ಸ್ನಾನಘಟ್ಟಕ್ಕೆ ತೆರಳಿ ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಶಾಂತಿ ಶೇಖರನ್ ಅವರು ಪುತ್ರ ಆದಿತ್ಯ ನದಿಯ ಸೆಳೆತಕ್ಕೆ ಒಳಗಾಗಿ ನೀರು ಪಾಲಾಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ನೀರಿಗೆ ಧುಮುಕಿದ್ದರು. ಆಕೆಯ ಪತಿ ಮುರುಗನ್ ಕೂಡ ಪುತ್ರನನ್ನು ಕಾಪಾಡಲು ನೀರಿಗೆ ಹಾರಿದ್ದರು. ಆದಿತ್ಯ ಹಾಗೂ ಮುರುಗನ್ ಈಜಿ ದಡ ಸೇರಿದರೆ ಶಾಂತಿ ಶೇಖರನ್ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಕೊಚ್ಚಿ ಹೋಗಿದ್ದರು.
ಅಗ್ನಿಶಾಮಕ ದಳ, ಕೊಲ್ಲೂರು ಪೊಲೀಸರು ಹಾಗೂ ಈಶ್ವರ ಮಲ್ಪೆ ತಂಡದವರು ಶೋಧ ಕಾರ್ಯ ನಡೆಸಿದ್ದು, ರವಿವಾರ ಸಂಜೆ ಸೌಪರ್ಣಿಕಾ ನದಿಯ 1 ಕಿ.ಮೀ. ದೂರ ವ್ಯಾಪ್ತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…