ಕೊಲ್ಲೂರು: ಇಲ್ಲಿನ ಪ್ರಸಿದ್ಧ ಕ್ಷೇತ್ರ ಶ್ರೀ ಮೂಕಾಂಬಿಕಾ ದೇಗುಲಕ್ಕೆ ದರ್ಶನಕ್ಕೆ ಆಗಮಿಸಿದ್ದ ಮಹಿಳೆ ನದಿಯಲ್ಲಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸೆ. 10ರಂದು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿದ್ದ ತಿರುವನಂತಪುರದ ಮುರುಗನ್ ಅವರ ಪತ್ನಿ ಶಾಂತಿ ಶೇಖರನ್(42) ಅವರ ಮೃತದೇಹ ಸೆ. 11ರ ಸಂಜೆ ಅನತಿ ದೂರದಲ್ಲಿ ಪತ್ತೆಯಾಗಿದೆ.
ತಿರುವನಂತಪುರದಿಂದ ಕೊಲ್ಲೂರು ಕ್ಷೇತ್ರ ದರ್ಶನಕ್ಕೆ 14 ಮಂದಿಯ ತಂಡ ಆಗಮಿಸಿತ್ತು. ಅವರು ಸೌಪರ್ಣಿಕಾ ಸ್ನಾನಘಟ್ಟಕ್ಕೆ ತೆರಳಿ ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಶಾಂತಿ ಶೇಖರನ್ ಅವರು ಪುತ್ರ ಆದಿತ್ಯ ನದಿಯ ಸೆಳೆತಕ್ಕೆ ಒಳಗಾಗಿ ನೀರು ಪಾಲಾಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ನೀರಿಗೆ ಧುಮುಕಿದ್ದರು. ಆಕೆಯ ಪತಿ ಮುರುಗನ್ ಕೂಡ ಪುತ್ರನನ್ನು ಕಾಪಾಡಲು ನೀರಿಗೆ ಹಾರಿದ್ದರು. ಆದಿತ್ಯ ಹಾಗೂ ಮುರುಗನ್ ಈಜಿ ದಡ ಸೇರಿದರೆ ಶಾಂತಿ ಶೇಖರನ್ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಕೊಚ್ಚಿ ಹೋಗಿದ್ದರು.
ಅಗ್ನಿಶಾಮಕ ದಳ, ಕೊಲ್ಲೂರು ಪೊಲೀಸರು ಹಾಗೂ ಈಶ್ವರ ಮಲ್ಪೆ ತಂಡದವರು ಶೋಧ ಕಾರ್ಯ ನಡೆಸಿದ್ದು, ರವಿವಾರ ಸಂಜೆ ಸೌಪರ್ಣಿಕಾ ನದಿಯ 1 ಕಿ.ಮೀ. ದೂರ ವ್ಯಾಪ್ತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…