Featured

ಕೆ ಎಂ ಎಫ್ ವತಿಯಿಂದ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಪರಿಕರ ಕೊಡುಗೆ: vishwanews24

ಕಾಪು : ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೆ.ಎಂ.ಎಫ್ ವತಿಯಿಂದ ಕೊಡ ಮಾಡಲ್ಪಟ್ಟ ಐವತ್ತು ಸಾವಿರ ರೂಪಾಯಿ ಮೌಲ್ಯದ ಔಷಧಿ ಪರಿಕರಗಳನ್ನು ಶನಿವಾರ ಹಸ್ತಾಂತರಿಸಲಾಯಿತು.

ಔಷಧಿ ಪರಿಕರಗಳನ್ನು ಹಸ್ತಾಂತರಿಸಿದ ಕೆ.ಎಂ.ಎಫ್ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ತಾರತಮ್ಯ ರಹಿತ ಸೇವೆ ನೀಡಿರುವ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲೆಗೆ ಮಾದರಿಯಾಗಿ ಮೂಡಿಬಂದಿದೆ. ಇಲ್ಲಿನ‌ ಸೇವೆಯನ್ನು ಗುರುತಿಸಿ, ಸಾರ್ವಜನಿಕರ ಸೇವೆಗೆ ಅವಶ್ಯಕತೆ ಇರುವ ಸವಲತ್ತುಗಳನ್ನು ನೀಡಿದ್ದೇವೆ. ಅಗತ್ಯವಿದ್ದಲ್ಲಿ ಇನ್ನಷ್ಟು ಉತ್ತಮ ಸೇವೆ ನೀಡಲು ಬದ್ಧರಿದ್ದೇವೆ ಎಂದರು.

ಕಾಪು ತಾಲೂಕಿನ ಜನತೆಯ ಅನುಕೂಲಕ್ಕಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿಡ್ನಿ ಡಯಾಲಿಸಿಸ್ ಘಟಕ ಸ್ಥಾಪನೆಯ ಅತ್ಯಗತ್ಯವಾಗಿದ್ದು ಅದಕ್ಕೆ ಪೂರಕವಾಗಿ ಕೆಎಂಎಫ್ ಸಹಿತ ವಿವಿಧ ಸಂಘ ಸಂಸ್ಥೆಗಳ ಮೂಲಕವಾಗಿ ಸಹಕರಿಸುವುದಾಗಿ ಭರವಸೆ ನೀಡಿದರು.

ಸ್ಪೂರ್ತಿ ದಿವಾಕರ ಶೆಟ್ಟಿ,
ಗಿರಿಜಾ ಹೆಲ್ತ್ ಕೇರ್ ಸರ್ವೀಸಸ್ ನ ಆಡಳಿಯ ನಿರ್ದೇಶಕ ರವೀಂದ್ರ ಕೆ. ಶೆಟ್ಟಿ, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಮಮತಾ ರೈ ಪ್ರಸ್ತಾವನೆಗೈದು, ವಂದಿಸಿದರು. ಚಂದ್ರಕಲಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

3 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

5 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

5 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

6 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

6 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

6 hours ago