ಕಾಪು : ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೆ.ಎಂ.ಎಫ್ ವತಿಯಿಂದ ಕೊಡ ಮಾಡಲ್ಪಟ್ಟ ಐವತ್ತು ಸಾವಿರ ರೂಪಾಯಿ ಮೌಲ್ಯದ ಔಷಧಿ ಪರಿಕರಗಳನ್ನು ಶನಿವಾರ ಹಸ್ತಾಂತರಿಸಲಾಯಿತು.
ಔಷಧಿ ಪರಿಕರಗಳನ್ನು ಹಸ್ತಾಂತರಿಸಿದ ಕೆ.ಎಂ.ಎಫ್ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ತಾರತಮ್ಯ ರಹಿತ ಸೇವೆ ನೀಡಿರುವ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲೆಗೆ ಮಾದರಿಯಾಗಿ ಮೂಡಿಬಂದಿದೆ. ಇಲ್ಲಿನ ಸೇವೆಯನ್ನು ಗುರುತಿಸಿ, ಸಾರ್ವಜನಿಕರ ಸೇವೆಗೆ ಅವಶ್ಯಕತೆ ಇರುವ ಸವಲತ್ತುಗಳನ್ನು ನೀಡಿದ್ದೇವೆ. ಅಗತ್ಯವಿದ್ದಲ್ಲಿ ಇನ್ನಷ್ಟು ಉತ್ತಮ ಸೇವೆ ನೀಡಲು ಬದ್ಧರಿದ್ದೇವೆ ಎಂದರು.
ಕಾಪು ತಾಲೂಕಿನ ಜನತೆಯ ಅನುಕೂಲಕ್ಕಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿಡ್ನಿ ಡಯಾಲಿಸಿಸ್ ಘಟಕ ಸ್ಥಾಪನೆಯ ಅತ್ಯಗತ್ಯವಾಗಿದ್ದು ಅದಕ್ಕೆ ಪೂರಕವಾಗಿ ಕೆಎಂಎಫ್ ಸಹಿತ ವಿವಿಧ ಸಂಘ ಸಂಸ್ಥೆಗಳ ಮೂಲಕವಾಗಿ ಸಹಕರಿಸುವುದಾಗಿ ಭರವಸೆ ನೀಡಿದರು.
ಸ್ಪೂರ್ತಿ ದಿವಾಕರ ಶೆಟ್ಟಿ,
ಗಿರಿಜಾ ಹೆಲ್ತ್ ಕೇರ್ ಸರ್ವೀಸಸ್ ನ ಆಡಳಿಯ ನಿರ್ದೇಶಕ ರವೀಂದ್ರ ಕೆ. ಶೆಟ್ಟಿ, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಮಮತಾ ರೈ ಪ್ರಸ್ತಾವನೆಗೈದು, ವಂದಿಸಿದರು. ಚಂದ್ರಕಲಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…