ಮಣಿಪಾಲ, 2ನೇ ಜನವರಿ 2021: ಮಣಿಪಾಲದ ಕಸರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ನಡೆಸುತ್ತಿದ್ದು ಇದನ್ನು ಭಾರತದ ಕೆಲವೇ ಪ್ರತಿಷ್ಠಿತ ಕ್ಯಾನ್ಸರ್ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯ ಶಸ್ತ್ರಚಿಕಿತ್ಸಕ ಡಾ.ನವೀನ ಕುಮಾರ ಹೇಳಿದರು.
ಶ್ವಾಸ ನಾಳದ (ವಿಂಡ್ ಪೈಪ್ ) ಕ್ಯಾನ್ಸರ್ ಶಸ್ತ್ರಚಿಕಿತ್ಸೆಯು ಒಂದು ಕ್ಲಿಷ್ಟಕರವಾದ ಮತ್ತು ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳಲ್ಲಿ ಒಂದಾಗಿದ್ದು, ಅಲ್ಲಿ ಕ್ಯಾನ್ಸರ್ ಗೆಡ್ಡೆಯ ಜೊತೆಗೆ ಶ್ವಾಸನಾಳದ ಭಾಗವನ್ನು ತೆಗೆದುಹಾಕಲಾಗುತ್ತದೆ ಮತ್ತು ಉಳಿದ ಶ್ವಾಸ ನಾಳವನ್ನು ಕೆಳಗಿನ ಭಾಗ ಅಥವಾ ಶಾಖೆಗಳಿಗೆ (ಮುಖ್ಯ, ಬ್ರಾಂಕಸ್) ಸಂಪರ್ಕಿಸಲಾಗುತ್ತದೆ. ಶ್ವಾಸ ನಾಳದ ಕ್ಯಾನ್ಸರ್, ಶ್ವಾಸನಾಳವನ್ನು ಮುಚ್ಚುವುದರ ಮೂಲಕ ಉಸಿರಾಟದ ತೊಂದರೆಗಳಿಗೆ ಕಾರಣವಾಗುತ್ತದೆ. ಈ ಶಸ್ತ್ರಚಿಕಿತ್ಸೆಯು ರೋಗಿಯ ಜೀವ ಉಳಿಸುವ ಮತ್ತು ಕ್ಯಾನ್ಸರ್ ಗುಣಪಡಿಸುವ ವಿಧಾನವಾಗಿ ಮಣಿಪಾಲದ ಕಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗವು ಇತ್ತೀಚೆಗೆ 70 ವರ್ಷ ರೋಗಿ ಸೇರಿದಂತೆ, ಇಂತಹ4 ಕಾನ್ಸರ್ ರೋಗಿಗಳಿಗೆ ಪ್ರಮುಖ ಟ್ರಾಕಿಯೊಬ್ರಾಂಕಿಲ್ (ಶ್ವಾಸನಾಳದ) ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಪ್ರಸ್ತುತ ಈ ರೋಗಿಯ 9 ತಿಂಗಳಿಂದ ಆರೋಗ್ಯವಾಗಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯ ಶಸ್ತ್ರಚಿಕಿತ್ಸಕ ಡಾ.ನವೀನ ಕುಮಾರ ಹೇಳಿದರು.
ಹೀಗೆ ಹದಿನೈದು ವರ್ಷದ ಬಾಲಕನಿಗೆ ಕೂಡ ಎದೆಯಲ್ಲಿ ಗೆಡ್ಡೆಯಾಗಿದ್ದು ಇದನ್ನು ಕೂಡ 14 ಗಂಟೆಗೆ ಸುದೀರ್ಘ ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು ಪ್ರಸ್ತುತ ಈ ವ್ಯಕ್ತಿ ಕೂಡ ತಪಾಸಣೆಯೊಂದಿಗೆ ಆರೋಗ್ಯವಾಗಿದ್ದಾರೆ ಎಂದರು.
ಹೀಗೆ ಹತ್ತಾರು ಇಂತಹ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆಯ ಮೂಲಕ ಪರಿಹಾರ ನೀಡುವಲ್ಲಿ ಮುಂಬೈನ ಪ್ರತಿಷ್ಠಿತ ಟಾಟಾ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ತರಬೇತಿ ಪಡೆದ ಡಾ.ನವಾಜ್ ಉಸ್ಮಾನ್,ಡಾ.ಕೇಶವ ರಾಜನ್,ಡಾ.ಪ್ರೀತಿ ಶೆಟ್ಟಿ,ನುರಿತ ತಂಡ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಾ.ಸುಧಾ ಪ್ರಭು,ಡಾ.ಪದ್ಮರಾಜ್ ಹೆಗ್ಡೆ, ಡಾ ನವೀನ್ ಸಾಲಿನ್ಸ್ ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…