Featured

ಕೆ.ಎಮ್ ಸಿ ಮಣಿಪಾಲ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಯಲ್ಲಿ ರಾಷ್ಟ್ರೀಯ-ಅಂತರಾಷ್ಟ್ರೀಯ ಕ್ಯಾನ್ಸರ್ ಕೇಂದ್ರಗಳಿಗೆ ಸಮನವಾಗಿ ಚಿಕಿತ್ಸೆ ಮಾಡುತ್ತಿದೆ: ಡಾ ನವೀನ್ ಕುಮಾರ್-vishwanews24

ಮಣಿಪಾಲ, 2ನೇ ಜನವರಿ 2021: ಮಣಿಪಾಲದ ಕಸರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ನಡೆಸುತ್ತಿದ್ದು ಇದನ್ನು ಭಾರತದ ಕೆಲವೇ ಪ್ರತಿಷ್ಠಿತ ಕ್ಯಾನ್ಸರ್ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯ ಶಸ್ತ್ರಚಿಕಿತ್ಸಕ ಡಾ.ನವೀನ ಕುಮಾರ ಹೇಳಿದರು.

ಶ್ವಾಸ ನಾಳದ (ವಿಂಡ್ ಪೈಪ್ ) ಕ್ಯಾನ್ಸರ್ ಶಸ್ತ್ರಚಿಕಿತ್ಸೆಯು ಒಂದು ಕ್ಲಿಷ್ಟಕರವಾದ ಮತ್ತು ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳಲ್ಲಿ ಒಂದಾಗಿದ್ದು, ಅಲ್ಲಿ ಕ್ಯಾನ್ಸರ್ ಗೆಡ್ಡೆಯ ಜೊತೆಗೆ ಶ್ವಾಸನಾಳದ ಭಾಗವನ್ನು ತೆಗೆದುಹಾಕಲಾಗುತ್ತದೆ ಮತ್ತು ಉಳಿದ ಶ್ವಾಸ ನಾಳವನ್ನು ಕೆಳಗಿನ ಭಾಗ ಅಥವಾ ಶಾಖೆಗಳಿಗೆ (ಮುಖ್ಯ, ಬ್ರಾಂಕಸ್) ಸಂಪರ್ಕಿಸಲಾಗುತ್ತದೆ. ಶ್ವಾಸ ನಾಳದ ಕ್ಯಾನ್ಸರ್, ಶ್ವಾಸನಾಳವನ್ನು ಮುಚ್ಚುವುದರ ಮೂಲಕ ಉಸಿರಾಟದ ತೊಂದರೆಗಳಿಗೆ ಕಾರಣವಾಗುತ್ತದೆ. ಈ ಶಸ್ತ್ರಚಿಕಿತ್ಸೆಯು ರೋಗಿಯ ಜೀವ ಉಳಿಸುವ ಮತ್ತು ಕ್ಯಾನ್ಸರ್ ಗುಣಪಡಿಸುವ ವಿಧಾನವಾಗಿ ಮಣಿಪಾಲದ ಕಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗವು ಇತ್ತೀಚೆಗೆ 70 ವರ್ಷ ರೋಗಿ ಸೇರಿದಂತೆ, ಇಂತಹ4 ಕಾನ್ಸರ್ ರೋಗಿಗಳಿಗೆ ಪ್ರಮುಖ ಟ್ರಾಕಿಯೊಬ್ರಾಂಕಿಲ್ (ಶ್ವಾಸನಾಳದ) ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಪ್ರಸ್ತುತ ಈ ರೋಗಿಯ 9 ತಿಂಗಳಿಂದ ಆರೋಗ್ಯವಾಗಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯ ಶಸ್ತ್ರಚಿಕಿತ್ಸಕ ಡಾ.ನವೀನ ಕುಮಾರ ಹೇಳಿದರು.

ಹೀಗೆ ಹದಿನೈದು ವರ್ಷದ ಬಾಲಕನಿಗೆ ಕೂಡ ಎದೆಯಲ್ಲಿ ಗೆಡ್ಡೆಯಾಗಿದ್ದು ಇದನ್ನು ಕೂಡ 14 ಗಂಟೆಗೆ ಸುದೀರ್ಘ ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು ಪ್ರಸ್ತುತ ಈ ವ್ಯಕ್ತಿ ಕೂಡ ತಪಾಸಣೆಯೊಂದಿಗೆ ಆರೋಗ್ಯವಾಗಿದ್ದಾರೆ ಎಂದರು.
ಹೀಗೆ ಹತ್ತಾರು ಇಂತಹ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆಯ ಮೂಲಕ ಪರಿಹಾರ ನೀಡುವಲ್ಲಿ ಮುಂಬೈನ ಪ್ರತಿಷ್ಠಿತ ಟಾಟಾ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ತರಬೇತಿ ಪಡೆದ ಡಾ.ನವಾಜ್ ಉಸ್ಮಾನ್,ಡಾ.ಕೇಶವ ರಾಜನ್,ಡಾ.ಪ್ರೀತಿ ಶೆಟ್ಟಿ,ನುರಿತ ತಂಡ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಾ.ಸುಧಾ ಪ್ರಭು,ಡಾ.ಪದ್ಮರಾಜ್ ಹೆಗ್ಡೆ, ಡಾ ನವೀನ್ ಸಾಲಿನ್ಸ್ ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್ 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

24 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago