Featured

ಕೆ.ಎಮ್ ಸಿ ಮಣಿಪಾಲ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಯಲ್ಲಿ ರಾಷ್ಟ್ರೀಯ-ಅಂತರಾಷ್ಟ್ರೀಯ ಕ್ಯಾನ್ಸರ್ ಕೇಂದ್ರಗಳಿಗೆ ಸಮನವಾಗಿ ಚಿಕಿತ್ಸೆ ಮಾಡುತ್ತಿದೆ: ಡಾ ನವೀನ್ ಕುಮಾರ್-vishwanews24

ಮಣಿಪಾಲ, 2ನೇ ಜನವರಿ 2021: ಮಣಿಪಾಲದ ಕಸರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ನಡೆಸುತ್ತಿದ್ದು ಇದನ್ನು ಭಾರತದ ಕೆಲವೇ ಪ್ರತಿಷ್ಠಿತ ಕ್ಯಾನ್ಸರ್ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯ ಶಸ್ತ್ರಚಿಕಿತ್ಸಕ ಡಾ.ನವೀನ ಕುಮಾರ ಹೇಳಿದರು.

ಶ್ವಾಸ ನಾಳದ (ವಿಂಡ್ ಪೈಪ್ ) ಕ್ಯಾನ್ಸರ್ ಶಸ್ತ್ರಚಿಕಿತ್ಸೆಯು ಒಂದು ಕ್ಲಿಷ್ಟಕರವಾದ ಮತ್ತು ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳಲ್ಲಿ ಒಂದಾಗಿದ್ದು, ಅಲ್ಲಿ ಕ್ಯಾನ್ಸರ್ ಗೆಡ್ಡೆಯ ಜೊತೆಗೆ ಶ್ವಾಸನಾಳದ ಭಾಗವನ್ನು ತೆಗೆದುಹಾಕಲಾಗುತ್ತದೆ ಮತ್ತು ಉಳಿದ ಶ್ವಾಸ ನಾಳವನ್ನು ಕೆಳಗಿನ ಭಾಗ ಅಥವಾ ಶಾಖೆಗಳಿಗೆ (ಮುಖ್ಯ, ಬ್ರಾಂಕಸ್) ಸಂಪರ್ಕಿಸಲಾಗುತ್ತದೆ. ಶ್ವಾಸ ನಾಳದ ಕ್ಯಾನ್ಸರ್, ಶ್ವಾಸನಾಳವನ್ನು ಮುಚ್ಚುವುದರ ಮೂಲಕ ಉಸಿರಾಟದ ತೊಂದರೆಗಳಿಗೆ ಕಾರಣವಾಗುತ್ತದೆ. ಈ ಶಸ್ತ್ರಚಿಕಿತ್ಸೆಯು ರೋಗಿಯ ಜೀವ ಉಳಿಸುವ ಮತ್ತು ಕ್ಯಾನ್ಸರ್ ಗುಣಪಡಿಸುವ ವಿಧಾನವಾಗಿ ಮಣಿಪಾಲದ ಕಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗವು ಇತ್ತೀಚೆಗೆ 70 ವರ್ಷ ರೋಗಿ ಸೇರಿದಂತೆ, ಇಂತಹ4 ಕಾನ್ಸರ್ ರೋಗಿಗಳಿಗೆ ಪ್ರಮುಖ ಟ್ರಾಕಿಯೊಬ್ರಾಂಕಿಲ್ (ಶ್ವಾಸನಾಳದ) ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಪ್ರಸ್ತುತ ಈ ರೋಗಿಯ 9 ತಿಂಗಳಿಂದ ಆರೋಗ್ಯವಾಗಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯ ಶಸ್ತ್ರಚಿಕಿತ್ಸಕ ಡಾ.ನವೀನ ಕುಮಾರ ಹೇಳಿದರು.

ಹೀಗೆ ಹದಿನೈದು ವರ್ಷದ ಬಾಲಕನಿಗೆ ಕೂಡ ಎದೆಯಲ್ಲಿ ಗೆಡ್ಡೆಯಾಗಿದ್ದು ಇದನ್ನು ಕೂಡ 14 ಗಂಟೆಗೆ ಸುದೀರ್ಘ ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು ಪ್ರಸ್ತುತ ಈ ವ್ಯಕ್ತಿ ಕೂಡ ತಪಾಸಣೆಯೊಂದಿಗೆ ಆರೋಗ್ಯವಾಗಿದ್ದಾರೆ ಎಂದರು.
ಹೀಗೆ ಹತ್ತಾರು ಇಂತಹ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆಯ ಮೂಲಕ ಪರಿಹಾರ ನೀಡುವಲ್ಲಿ ಮುಂಬೈನ ಪ್ರತಿಷ್ಠಿತ ಟಾಟಾ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ತರಬೇತಿ ಪಡೆದ ಡಾ.ನವಾಜ್ ಉಸ್ಮಾನ್,ಡಾ.ಕೇಶವ ರಾಜನ್,ಡಾ.ಪ್ರೀತಿ ಶೆಟ್ಟಿ,ನುರಿತ ತಂಡ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಾ.ಸುಧಾ ಪ್ರಭು,ಡಾ.ಪದ್ಮರಾಜ್ ಹೆಗ್ಡೆ, ಡಾ ನವೀನ್ ಸಾಲಿನ್ಸ್ ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್ 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

11 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

21 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

38 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

43 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

50 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago