Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ರಾಮನಗರ: ಸಚಿವ ಕೆ.ಎಸ್ ಈಶ್ವರಪ್ಪ ಅವರು ಕಾಂಗ್ರೆಸ್ಗೆ ಆಹಾರ ಆಗೋದು ಬೇಡ. ಈಶ್ವರಪ್ಪ ಸೀನಿಯರ್ ರಾಜಕಾರಣಿ ಇದ್ದಾರೆ. ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದರು.
ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಒಂದು ವಾರದ ಹಿಂದೆ ಚರ್ಚೆ ನಡೆಯುತ್ತಿತ್ತು. ಈಶ್ವರಪ್ಪ ಮೇಲೆ ವ್ಯಕ್ತಿ ಅನೇಕರಿಗೆ ದೂರು ಕೊಟ್ಟಿದ್ದರು ಅಂತ ನೋಡಿದ್ದೇನೆ. ಈಗ ಸಡನ್ ಆಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ಹಿಂದಿನ ಬ್ಯಾಗ್ ರೌಂಡ್ ನನಗೆ ಗೊತ್ತಿಲ್ಲ ಎಂದರು.
ಡೆತ್ ನೋಟ್ ವಿಚಾರದಲ್ಲಿ ನೈತಿಕತೆ ವಿಚಾರ ಬಂದಾಗ ಈಶ್ವರಪ್ಪ ತೀರ್ಮಾನ ಮಾಡಬೇಕು. ಬಿಜೆಪಿಯಲ್ಲಿ ಆಂತರಿಕ ಗಲಾಟೆ ನಡೆಯುತ್ತಿದೆ. ಅನೇಕ ಸಚಿವರನ್ನ ತೆಗೆಯುತ್ತಾರೆ ಅಂತ ಚರ್ಚೆ ಆಗ್ತಿದೆ. ಈ ವಿಚಾರಕ್ಕೆ ಏನಾದ್ರು ಇದು ಸಂಬಂಧ ಇದೆಯಾ ಗೊತ್ತಿಲ್ಲ. ಸರ್ಕಾರಕ್ಕೆ ಘಟನೆ ಬಗ್ಗೆ ಸತ್ಯ ಹೊರಗೆ ತೆಗೆಯುವ ಜವಾಬ್ದಾರಿ ಇದೆ ಎಂದು ಹೇಳಿದರು.
ಈಶ್ವರಪ್ಪ ಅವರು ಕಾಂಗ್ರೆಸ್ಸಿಗೆ ಆಹಾರ ಆಗೋದು ಬೇಡ. ಈಶ್ವರಪ್ಪ ಸೀನಿಯರ್ ರಾಜಕಾರಣಿ ಇದ್ದಾರೆ. ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ನನ್ನದು ತಪ್ಪಿಲ್ಲ ಅಂತ ಸಾಬೀತು ಮಾಡಲಿ. ಆದರೆ ಈಶ್ವರಪ್ಪರನ್ನ ಮಾತ್ರ ಯಾಕೆ ಟಾರ್ಗೆಟ್ ಮಾಡ್ತಿದ್ದಾರೆ. 40% ಆರೋಪ ಎಲ್ಲಾ ಇಲಾಖೆ ಮೇಲೆ ಇದೆ. ಈಗ ಒಂದೇ ಇಲಾಖೆ ಮೇಲೆ ಯಾಕೆ ಆರೋಪ ಬಂದಿದೆ ಎಂದರು.
ಈಶ್ವರಪ್ಪ ಮೇಲೆ ಇಂತಹ ವಿಷಯ ಬಂದಿರೋದಕ್ಕೆ ಸಂಶಯ ಬರುತ್ತಿದೆ. ಈಶ್ವರಪ್ಪ ರಾಜೀನಾಮೆ ಕೊಡೋದು ಉತ್ತಮ. ಮಂತ್ರಿ ಸ್ಥಾನ ಶಾಶ್ವತ ಅಲ್ಲ. ನೀವು ಕಳಂಕರಹಿತರಾಗಿ ಹೊರಗೆ ಬರಬೇಕು. ಹೀಗಾಗಿ ರಾಜೀನಾಮೆ ಕೊಟ್ಟು ನಿರಪರಾಧಿ ಅಂತ ಸಾಬೀತುಪಡಿಸಲಿ. ಸರ್ಕಾರ ಕೂಡಾ ಈ ಬಗ್ಗೆ ತನಿಖೆ ಮಾಡಿ ಸತ್ಯ ಸತ್ಯತೆ ಹೊರಗೆ ತರುವ ಕೆಲಸ ಮಾಡಲಿ ಎಂದು ಹೇಳಿದರು.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…