Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ರಾಮನಗರ: ಸಚಿವ ಕೆ.ಎಸ್ ಈಶ್ವರಪ್ಪ ಅವರು ಕಾಂಗ್ರೆಸ್ಗೆ ಆಹಾರ ಆಗೋದು ಬೇಡ. ಈಶ್ವರಪ್ಪ ಸೀನಿಯರ್ ರಾಜಕಾರಣಿ ಇದ್ದಾರೆ. ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದರು.
ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಒಂದು ವಾರದ ಹಿಂದೆ ಚರ್ಚೆ ನಡೆಯುತ್ತಿತ್ತು. ಈಶ್ವರಪ್ಪ ಮೇಲೆ ವ್ಯಕ್ತಿ ಅನೇಕರಿಗೆ ದೂರು ಕೊಟ್ಟಿದ್ದರು ಅಂತ ನೋಡಿದ್ದೇನೆ. ಈಗ ಸಡನ್ ಆಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ಹಿಂದಿನ ಬ್ಯಾಗ್ ರೌಂಡ್ ನನಗೆ ಗೊತ್ತಿಲ್ಲ ಎಂದರು.
ಡೆತ್ ನೋಟ್ ವಿಚಾರದಲ್ಲಿ ನೈತಿಕತೆ ವಿಚಾರ ಬಂದಾಗ ಈಶ್ವರಪ್ಪ ತೀರ್ಮಾನ ಮಾಡಬೇಕು. ಬಿಜೆಪಿಯಲ್ಲಿ ಆಂತರಿಕ ಗಲಾಟೆ ನಡೆಯುತ್ತಿದೆ. ಅನೇಕ ಸಚಿವರನ್ನ ತೆಗೆಯುತ್ತಾರೆ ಅಂತ ಚರ್ಚೆ ಆಗ್ತಿದೆ. ಈ ವಿಚಾರಕ್ಕೆ ಏನಾದ್ರು ಇದು ಸಂಬಂಧ ಇದೆಯಾ ಗೊತ್ತಿಲ್ಲ. ಸರ್ಕಾರಕ್ಕೆ ಘಟನೆ ಬಗ್ಗೆ ಸತ್ಯ ಹೊರಗೆ ತೆಗೆಯುವ ಜವಾಬ್ದಾರಿ ಇದೆ ಎಂದು ಹೇಳಿದರು.
ಈಶ್ವರಪ್ಪ ಅವರು ಕಾಂಗ್ರೆಸ್ಸಿಗೆ ಆಹಾರ ಆಗೋದು ಬೇಡ. ಈಶ್ವರಪ್ಪ ಸೀನಿಯರ್ ರಾಜಕಾರಣಿ ಇದ್ದಾರೆ. ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ನನ್ನದು ತಪ್ಪಿಲ್ಲ ಅಂತ ಸಾಬೀತು ಮಾಡಲಿ. ಆದರೆ ಈಶ್ವರಪ್ಪರನ್ನ ಮಾತ್ರ ಯಾಕೆ ಟಾರ್ಗೆಟ್ ಮಾಡ್ತಿದ್ದಾರೆ. 40% ಆರೋಪ ಎಲ್ಲಾ ಇಲಾಖೆ ಮೇಲೆ ಇದೆ. ಈಗ ಒಂದೇ ಇಲಾಖೆ ಮೇಲೆ ಯಾಕೆ ಆರೋಪ ಬಂದಿದೆ ಎಂದರು.
ಈಶ್ವರಪ್ಪ ಮೇಲೆ ಇಂತಹ ವಿಷಯ ಬಂದಿರೋದಕ್ಕೆ ಸಂಶಯ ಬರುತ್ತಿದೆ. ಈಶ್ವರಪ್ಪ ರಾಜೀನಾಮೆ ಕೊಡೋದು ಉತ್ತಮ. ಮಂತ್ರಿ ಸ್ಥಾನ ಶಾಶ್ವತ ಅಲ್ಲ. ನೀವು ಕಳಂಕರಹಿತರಾಗಿ ಹೊರಗೆ ಬರಬೇಕು. ಹೀಗಾಗಿ ರಾಜೀನಾಮೆ ಕೊಟ್ಟು ನಿರಪರಾಧಿ ಅಂತ ಸಾಬೀತುಪಡಿಸಲಿ. ಸರ್ಕಾರ ಕೂಡಾ ಈ ಬಗ್ಗೆ ತನಿಖೆ ಮಾಡಿ ಸತ್ಯ ಸತ್ಯತೆ ಹೊರಗೆ ತರುವ ಕೆಲಸ ಮಾಡಲಿ ಎಂದು ಹೇಳಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…