ಕಾಪು: ಕಾಪು ಪುರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಅಮ್ಮ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿಯವರ ವತಿಯಿಂದ ರೇಷನ್ ಕಿಟ್ ವಿತರಿಸುವ ಕಾರ್ಯ ಮತ್ತು ತಲಾ ಒಬ್ಬರಿಗೆ ಒಂದು ಸಾವಿರ ರೂಪಾಯಿ ನಗದು ನೀಡುವ ಕಾರ್ಯ ಕಾಪು ಪುರಸಭೆಯಲ್ಲಿನಡೆಯಿತು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಕಿಟ್ ವಿತರಿಸಿದರು.
ಕಿಟ್ ಕೊಡುಗೆ ನೀಡಿದ ಕೆ.ವಾಸುದೇವ ಶೆಟ್ಟಿ ಮಾತಾಡಿ ” ಇದುವರೆಗೆ ನಾಲ್ಕು ನೂರು ಕುಟುಂಬಗಳಿಗೆ ಅಮ್ಮ ಟ್ರಸ್ಟ್ ವತಿಯಿಂದ ಕಿಟ್ ವಿತರಿಸಿದ್ದು,ವಿಶೇಷವಾಗಿ ಕಾಪು ಪುರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ವಿಶೇಷವಾಗಿ ಗೌರವಿಸಿ ಅವರಿಗೆ ರೇಷನ್ ಕಿಟ್ ಮತ್ತು ತಲಾ ಒಂದು ಸಾವಿರ ನಗದು ವಿತರಣೆ ಮಾಡುತ್ತಿದ್ದೇವೆ.ಇವೆಲ್ಲವೂ ದೇವರ ಸೇವೆ ಎಂಬ ದೃಷ್ಟಿಯಿಂದ ಕಾರ್ಯ ನಡೆಯುತ್ತಿದೆ ಎಂದರು.
ಸುಮಾರು ಐವತ್ತು ಪೌರಕಾರ್ಮಿಕರಿಗೆ ತಲಾ ಒಂದು ಸಾವಿರದಂತೆ ಐವತ್ತು ಸಾವಿರ ಪ್ರೋತ್ಸಾಹಕರ ಧನಸಹಾಯ ಮಾಡಲಾಯಿತು.
ಈ ಸಂಧರ್ಭದಲ್ಲಿ ತಹಶಿಲ್ದಾರ್ ಮಹಮ್ಮದ್ ಇಸಾಕ್, ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ ಟ್ರಸ್ಟಿಗಳಾದ ನಡಿಕೆರೆ ರತ್ನಾಕರ್ ಶೆಟ್ಟಿ, ಭೂಪತಿ ಶೆಟ್ಟಿ, ಹರೀಶ್ ಪೂಜಾರಿ,ಪುರಸಭಾ ಸದಸ್ಯ ಅನಿಲ್ ಕುಮಾರ್ , ಸುರೇಶ್ ದೇವಾಡಿಗ, ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…