ಕಾಪು: ಕಾಪು ಪುರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಅಮ್ಮ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿಯವರ ವತಿಯಿಂದ ರೇಷನ್ ಕಿಟ್ ವಿತರಿಸುವ ಕಾರ್ಯ ಮತ್ತು ತಲಾ ಒಬ್ಬರಿಗೆ ಒಂದು ಸಾವಿರ ರೂಪಾಯಿ ನಗದು ನೀಡುವ ಕಾರ್ಯ ಕಾಪು ಪುರಸಭೆಯಲ್ಲಿನಡೆಯಿತು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಕಿಟ್ ವಿತರಿಸಿದರು.
ಕಿಟ್ ಕೊಡುಗೆ ನೀಡಿದ ಕೆ.ವಾಸುದೇವ ಶೆಟ್ಟಿ ಮಾತಾಡಿ ” ಇದುವರೆಗೆ ನಾಲ್ಕು ನೂರು ಕುಟುಂಬಗಳಿಗೆ ಅಮ್ಮ ಟ್ರಸ್ಟ್ ವತಿಯಿಂದ ಕಿಟ್ ವಿತರಿಸಿದ್ದು,ವಿಶೇಷವಾಗಿ ಕಾಪು ಪುರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ವಿಶೇಷವಾಗಿ ಗೌರವಿಸಿ ಅವರಿಗೆ ರೇಷನ್ ಕಿಟ್ ಮತ್ತು ತಲಾ ಒಂದು ಸಾವಿರ ನಗದು ವಿತರಣೆ ಮಾಡುತ್ತಿದ್ದೇವೆ.ಇವೆಲ್ಲವೂ ದೇವರ ಸೇವೆ ಎಂಬ ದೃಷ್ಟಿಯಿಂದ ಕಾರ್ಯ ನಡೆಯುತ್ತಿದೆ ಎಂದರು.
ಸುಮಾರು ಐವತ್ತು ಪೌರಕಾರ್ಮಿಕರಿಗೆ ತಲಾ ಒಂದು ಸಾವಿರದಂತೆ ಐವತ್ತು ಸಾವಿರ ಪ್ರೋತ್ಸಾಹಕರ ಧನಸಹಾಯ ಮಾಡಲಾಯಿತು.
ಈ ಸಂಧರ್ಭದಲ್ಲಿ ತಹಶಿಲ್ದಾರ್ ಮಹಮ್ಮದ್ ಇಸಾಕ್, ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ ಟ್ರಸ್ಟಿಗಳಾದ ನಡಿಕೆರೆ ರತ್ನಾಕರ್ ಶೆಟ್ಟಿ, ಭೂಪತಿ ಶೆಟ್ಟಿ, ಹರೀಶ್ ಪೂಜಾರಿ,ಪುರಸಭಾ ಸದಸ್ಯ ಅನಿಲ್ ಕುಮಾರ್ , ಸುರೇಶ್ ದೇವಾಡಿಗ, ಮೊದಲಾದವರು ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…