Featured

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ : ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ – Vishwanews24

ಡೆಹ್ರಾಡೂನ್‌: ‘ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲಿದೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹರೀಶ್‌ ರಾವತ್‌ ಹೇಳಿದ್ದಾರೆ.

“ಬಿಜೆಪಿ ಮಿತಿ ಮೀರಿ ವರ್ತಿಸುತ್ತಿದೆ. ಯಾರು ಕಾನೂನನ್ನು ಮುರಿಯುತ್ತಾರೋ ಅವರು ಮರ್ಯಾದಾ ಪುರುಷೋತ್ತಮ ರಾಮನ ಭಕ್ತನಾಗಲು ಸಾಧ್ಯವಿಲ್ಲ. ನಾವು ಕಾನೂನಿಗೆ ಗೌರವ ನೀಡುತ್ತೇವೆ. ಕಾಂಗ್ರೆಸ್​ ಅಧಿಕಾರ ಬಂದಮೇಲೆ ರಾಮ ಮಂದಿರ ನಿರ್ಮಾಣವಾಗಲಿದೆ,” ಎಂದು ಹೇಳುವ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್​ ಮಾತ್ರ ಅರ್ಹ ಎಂದು ಸೂಚ್ಯವಾಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ರಾವತ್‌, ‘ವಿರೋಧ ಪಕ್ಷಗಳನ್ನು ಅಧಿಕಾರದಿಂದ ಹೇಗಾದರೂ ಮಾಡಿ ಕೆಳಗಿಸುವುದು ಬಿಜೆಪಿ ಉದ್ದೇಶ. ಅದಕ್ಕಾಗಿ, ಹಣ ದುರ್ಬಳಕೆ, ತೋಳ್ಬಲದ ಜತೆಗೆ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಇಲಾಖೆಗಳಂತ ಸಂಸ್ಥೆಗಳನ್ನು ಬಿಜೆಪಿ ರಾಜಕೀಯ ಅಸ್ತ್ರಗಳನ್ನಾಗಿ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.

2025ರ ಒಳಗೆ ರಾಮ ಮಂದಿರ ನಿರ್ಮಾಣ ಮಾಡಬೇಕು ಎಂದು ಆರ್​ಎಸ್​​ಎಸ್​ನ ಎರಡನೇ ಮುಖ್ಯಸ್ಥ ಭಯ್ಯಾಜಿ ಜೋಶಿ ಶುಕ್ರವಾರ ಹೇಳಿಕೊಂಡಿದ್ದರು. ಅಲ್ಲದೆ, ಈ ಕ್ರಮದಿಂದ ದೇಶಕ್ಕೆ ಮುಂದಿನ 150 ವರ್ಷ ಒಳ್ಳೆಯದಾಗುತ್ತದೆ ಎಂದು ಹೇಳಿಕೊಂಡಿದ್ದರು. “1952ರಲ್ಲಿ ಸೋಮನಾಥ ದೇವಾಲಯ ನಿರ್ಮಾಣ ಮಾಡಲಾಯಿತು. ಅದಾದ ನಂತರ ದೇಶ ಅಭಿವೃದ್ಧಿ ವೇಗ ಪಡೆದುಕೊಂಡಿತ್ತು. 2025ರಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದ ನಂತರ ದೇಶಕ್ಕೆ ಒಳಿತಾಗಲಿದೆ. ನಂತರ 150 ವರ್ಷಗಳ ಕಾಲ ದೇಶಕ್ಕೆ ಯಾವುದೇ ಕೇಡು ಎದುರಾಗದು,” ಎಂದಿದ್ದರು ಭಯ್ಯಾಜಿ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹರೀಶ್​ ರಾವತ್​ ಈ ಹೇಳಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ನಡೆಸುತ್ತಿರುವ ಕುತಂತ್ರಕ್ಕೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ಸಿಗಲಿದೆ. ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಕೂಟ ಕರ್ನಾಟಕದಲ್ಲಿ 27 ಲೋಕಸಭೆ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದರು.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

5 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

6 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

6 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

7 hours ago