Featured

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ : ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ – Vishwanews24

ಡೆಹ್ರಾಡೂನ್‌: ‘ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲಿದೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹರೀಶ್‌ ರಾವತ್‌ ಹೇಳಿದ್ದಾರೆ.

“ಬಿಜೆಪಿ ಮಿತಿ ಮೀರಿ ವರ್ತಿಸುತ್ತಿದೆ. ಯಾರು ಕಾನೂನನ್ನು ಮುರಿಯುತ್ತಾರೋ ಅವರು ಮರ್ಯಾದಾ ಪುರುಷೋತ್ತಮ ರಾಮನ ಭಕ್ತನಾಗಲು ಸಾಧ್ಯವಿಲ್ಲ. ನಾವು ಕಾನೂನಿಗೆ ಗೌರವ ನೀಡುತ್ತೇವೆ. ಕಾಂಗ್ರೆಸ್​ ಅಧಿಕಾರ ಬಂದಮೇಲೆ ರಾಮ ಮಂದಿರ ನಿರ್ಮಾಣವಾಗಲಿದೆ,” ಎಂದು ಹೇಳುವ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್​ ಮಾತ್ರ ಅರ್ಹ ಎಂದು ಸೂಚ್ಯವಾಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ರಾವತ್‌, ‘ವಿರೋಧ ಪಕ್ಷಗಳನ್ನು ಅಧಿಕಾರದಿಂದ ಹೇಗಾದರೂ ಮಾಡಿ ಕೆಳಗಿಸುವುದು ಬಿಜೆಪಿ ಉದ್ದೇಶ. ಅದಕ್ಕಾಗಿ, ಹಣ ದುರ್ಬಳಕೆ, ತೋಳ್ಬಲದ ಜತೆಗೆ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಇಲಾಖೆಗಳಂತ ಸಂಸ್ಥೆಗಳನ್ನು ಬಿಜೆಪಿ ರಾಜಕೀಯ ಅಸ್ತ್ರಗಳನ್ನಾಗಿ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.

2025ರ ಒಳಗೆ ರಾಮ ಮಂದಿರ ನಿರ್ಮಾಣ ಮಾಡಬೇಕು ಎಂದು ಆರ್​ಎಸ್​​ಎಸ್​ನ ಎರಡನೇ ಮುಖ್ಯಸ್ಥ ಭಯ್ಯಾಜಿ ಜೋಶಿ ಶುಕ್ರವಾರ ಹೇಳಿಕೊಂಡಿದ್ದರು. ಅಲ್ಲದೆ, ಈ ಕ್ರಮದಿಂದ ದೇಶಕ್ಕೆ ಮುಂದಿನ 150 ವರ್ಷ ಒಳ್ಳೆಯದಾಗುತ್ತದೆ ಎಂದು ಹೇಳಿಕೊಂಡಿದ್ದರು. “1952ರಲ್ಲಿ ಸೋಮನಾಥ ದೇವಾಲಯ ನಿರ್ಮಾಣ ಮಾಡಲಾಯಿತು. ಅದಾದ ನಂತರ ದೇಶ ಅಭಿವೃದ್ಧಿ ವೇಗ ಪಡೆದುಕೊಂಡಿತ್ತು. 2025ರಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದ ನಂತರ ದೇಶಕ್ಕೆ ಒಳಿತಾಗಲಿದೆ. ನಂತರ 150 ವರ್ಷಗಳ ಕಾಲ ದೇಶಕ್ಕೆ ಯಾವುದೇ ಕೇಡು ಎದುರಾಗದು,” ಎಂದಿದ್ದರು ಭಯ್ಯಾಜಿ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹರೀಶ್​ ರಾವತ್​ ಈ ಹೇಳಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ನಡೆಸುತ್ತಿರುವ ಕುತಂತ್ರಕ್ಕೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ಸಿಗಲಿದೆ. ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಕೂಟ ಕರ್ನಾಟಕದಲ್ಲಿ 27 ಲೋಕಸಭೆ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದರು.

 

Vishwa News 24

Recent Posts

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

21 minutes ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

29 minutes ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

57 minutes ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

1 hour ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

1 hour ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

1 hour ago