ನವದೆಹಲಿ: ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಅಧಿಕಾರಕ್ಕೆ ಬಂದ ಮರುಕ್ಷಣವೇ ಯುವಜನತೆಯ ಪಾಲಿಗೆ ಕಂಟಕವಾಗಿರುವ ಅಗ್ನಿಪಥ (ಅಗ್ನಿವೀರ) ಸೇನಾ ನೇಮಕಾತಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ನೆಮಕಾತಿ ಪದ್ಧತಿಯನ್ನು ಮರುಜಾರಿ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕರು ಸೋಮವಾರ ಘೋಷಿಸಿದ್ದಾರೆ.
ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೂರೂ ಸೇನಾಪಡೆಗಳ ದಂಡನಾಯಕರಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ‘ಯುವಜನರನ್ನು ತೊಂದರೆಗೆ ಸಿಲುಕಿಸುವ ಅಗ್ನಿಪಥ ಯೋಜನೆಯನ್ನು ಕೂಡಲೇ ರದ್ದುಗೊಳಿಸಬೇಕು. ಇದರಿಂದ ನಾಲ್ಕು ವರ್ಷಗಳ ಹೊರಬರುವ ಅಗ್ನಿವೀರರಿಗೆ ಮತ್ತೆ ಉದ್ಯೋಗ ಹುಡುಕುವುದು ಕಷ್ಟವಾಗುತ್ತದೆ. ಅಲ್ಲದೆ ಅಗ್ನಿಪಥ ಯೋಜನೆ ಘೋಷಣೆಗೂ ಮೊದಲು ಸೇನೆಗೆ ಆಯ್ಕೆಯಾಗಿದ್ದ 2 ಲಕ್ಷ ಮಂದಿಗೆ ಪ್ರಕ್ರಿಯೆಯನ್ನೇ ರದ್ದುಗೊಳಿಸಿರುವುದಾಗಿ ತಿಳಿಸಿ ಅತಂತ್ರಕ್ಕೆ ಸಿಲುಕಿಸಲಾಗಿದೆ. ಅವರಿಗೂ ಕೂಡಲೇ ನೇಮಕಾತಿ ಆದೇಶವನ್ನು ನೀಡಲು ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.
‘ಈ ಯೋಜನೆಗೆ ತಮ್ಮ ಸಹಮತವಿರಲಿಲ್ಲ ಎಂಬುದಾಗಿ ಮಾಜಿ ಸಶಸ್ತ್ರ ಪಡೆಗಳ ಮುಖ್ಯಸ್ಥರಾದ ಜ। ಮನೋಜ್ ನರವಣೆ ಅವರೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ರದ್ದುಗೊಳಿಸಬೇಕು’ ಎಂದು ತಿಳಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…