ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ : ಚಿವ ಜಿ.ಟಿ.ದೇವೇಗೌಡ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಮೈಸೂರು : ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದು, ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಸರ್ಕಾರ ರಚನೆಯಾದ ಪ್ರಾರಂಭದಲ್ಲಿ ಬಿಜೆಪಿ ಅವರು ಆಪರೇಷನ್ ಕಮಲ ಮಾಡುತ್ತಿದ್ದರು. ಆದರೆ ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದರು.

ನರೇಂದ್ರ ಮೋದಿ ಕೇಂದ್ರದಲ್ಲಿ 5 ವರ್ಷ ಆಡಳಿತ ನಡೆಸುತ್ತಾರೆ. ಈ ಹಿಂದೆ ರಾಜೀವ್ ಗಾಂಧಿ ಅವರಿದ್ದಾಗ ಇಲ್ಲಿ ರಾಮಕೃಷ್ಣ ಹೆಗಡೆ ಇದ್ದರು. ಹಾಗೆಯೇ ನಮ್ಮಲ್ಲೂ ಕೂಡ ಯಾರೂ ಏನೇ ಮಾಡಿದರೂ ಹೆಚ್ಡಿಕೆ ಸಿಎಂ ಆಗಿರುತ್ತಾರೆ ಎಂದರು.