ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡುತ್ತಿರುವ ಲಕ್ಷಾಂತರ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ವಿವಿಧ ದೀರ್ಘಕಾಲೀನ ಕಾಯಿಲೆಗಳ ಚಿಕಿತ್ಸೆಗೆ ಬಳಸುವ 39 ಅಗತ್ಯ ಔಷಧಿಗಳ ಚಿಲ್ಲರೆ ಬೆಲೆಗೆ ಗರಿಷ್ಠ ಮಿತಿಯನ್ನು ನಿಗದಿಪಡಿಸಿ ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ ಆದೇಶ ಹೊರಡಿಸಿದೆ. ಇದರಿಂದ ಅಗತ್ಯ ಔಷಧಿಗಳ ಬೆಲೆ ತುಸು ಕಡಿಮೆಯಾಗುತ್ತದೆ.
ಇದನ್ನೂ ಓದಿ:
ಈ ಕ್ರಮವನ್ನು ಡ್ರಗ್ಸ್ (ಪ್ರೈಸ್ ಕಂಟ್ರೋಲ್) ಆದೇಶ–2013 (DPCO, 2013) ಅಡಿಯಲ್ಲಿ ಜಾರಿಗೆ ತರಲಾಗಿದೆ. ಔಷಧ ಕಂಪನಿಗಳು ಇನ್ನು ಮುಂದೆ ಎನ್ಪಿಪಿಎ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಈ ಔಷಧಿಗಳನ್ನು ಮಾರಾಟ ಮಾಡುವಂತಿಲ್ಲ. ಜೊತೆಗೆ ಹೊಸ ಬೆಲೆಗಳನ್ನು ಔಷಧಿಗಳ ಪ್ಯಾಕ್ಗಳ ಗರಿಷ್ಠ ಚಿಲ್ಲರೆ ಬೆಲೆ (MRP)ಯಲ್ಲಿ ಕೂಡಲೇ ಪರಿಷ್ಕರಿಸುವಂತೆ ಸೂಚಿಸಲಾಗಿದೆ.
ಮಧುಮೇಹ, ಬಿಪಿ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಸಾಮಾನ್ಯವಾಗಿ ವರ್ಷಗಳ ಕಾಲ ಅಥವಾ ಜೀವಮಾನವಿಡೀ ಔಷಧಿಗಳನ್ನು ಸೇವಿಸಬೇಕಾಗುತ್ತದೆ. ಸದ್ಯ ಗರಿಷ್ಠ ದರ ಮಿತಿ ನಿಗದಿಪಡಿಸಿರುವುದರಿಂದ ಔಷಧಿಗಳ ದರ ತುಸು ಪ್ರಮಾಣದಲ್ಲಿ ಇಳಿಕೆಯಾಗಲಿದೆ. ಇದರಿಂದ ತಿಂಗಳ ಹಾಗೂ ವಾರ್ಷಿಕ ವೆಚ್ಚದ ಲೆಕ್ಕದಲ್ಲಿ ಬಡ ಕುಟುಂಬಗಳಿಗೆ ಗಮನಾರ್ಹ ಉಳಿತಾಯವಾಗಲಿದೆ. ವಿಶೇಷವಾಗಿ ನಿವೃತ್ತರು, ಹಿರಿಯ ನಾಗರಿಕರು ಹಾಗೂ ಒಂದಕ್ಕಿಂತ ಹೆಚ್ಚು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಈ ನಿರ್ಧಾರ ನೆರವಾಗಲಿದೆ.
ಇದನ್ನೂ ಓದಿ:
ಮಧುಮೇಹ ಹಾಗೂ ಬಿಪಿ ಔಷಧಿಗಳ ಜೊತೆಗೆ ಕ್ಯಾಲ್ಸಿಯಂ ಮತ್ತು ವಿಟಮಿನ್-D3 ಮಾತ್ರೆಗಳ ಚಿಲ್ಲರೆ ದರವನ್ನು ಪ್ರತಿ ಮಾತ್ರೆಗೆ 8.93 (ಜಿಎಸ್ಟಿ ಸೇರಿ) ರೂ. ಎಂದು ಎನ್ಪಿಪಿಎ ನಿಗದಿಪಡಿಸಿದೆ. ಈ ಮಾತ್ರೆಗಳನ್ನು ಸಾಮಾನ್ಯವಾಗಿ ಹಿರಿಯ ನಾಗರಿಕರು, ಋತುಬಂಧದ ನಂತರದ ಮಹಿಳೆಯರು ಹಾಗೂ ಮೂಳೆ ದುರ್ಬಲತೆ ಇರುವವರಿಗೆ ವೈದ್ಯರು ಶಿಫಾರಸು ಮಾಡುತ್ತಾರೆ.
ನಾಯಿ ಅಥವಾ ರೇಬೀಸ್ ಶಂಕಿತ ಪ್ರಾಣಿಗಳ ಕಡಿತದ ಬಳಿಕ ತುರ್ತು ಚಿಕಿತ್ಸೆಯಲ್ಲಿ ಬಳಸುವ ಆ್ಯಂಟಿ-ರೇಬೀಸ್ ಇಮ್ಯುನೊಗ್ಲೋಬುಲಿನ್ ಇಂಜೆಕ್ಷನ್ನ ಚಿಲ್ಲರೆ ದರವನ್ನು 119.48 ರೂ.ಗೆ ಪರಿಷ್ಕರಿಸಲಾಗಿದೆ. ಈ ಔಷಧಿ ರೇಬೀಸ್ ಲಸಿಕೆಯೊಂದಿಗೆ ನೀಡಲಾಗುತ್ತಿದ್ದು, ಸೋಂಕಿನ ವಿರುದ್ಧ ತಕ್ಷಣದ ರಕ್ಷಣೆಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…