ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡುತ್ತಿರುವ ಲಕ್ಷಾಂತರ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ವಿವಿಧ ದೀರ್ಘಕಾಲೀನ ಕಾಯಿಲೆಗಳ ಚಿಕಿತ್ಸೆಗೆ ಬಳಸುವ 39 ಅಗತ್ಯ ಔಷಧಿಗಳ ಚಿಲ್ಲರೆ ಬೆಲೆಗೆ ಗರಿಷ್ಠ ಮಿತಿಯನ್ನು ನಿಗದಿಪಡಿಸಿ ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ ಆದೇಶ ಹೊರಡಿಸಿದೆ. ಇದರಿಂದ ಅಗತ್ಯ ಔಷಧಿಗಳ ಬೆಲೆ ತುಸು ಕಡಿಮೆಯಾಗುತ್ತದೆ.
ಇದನ್ನೂ ಓದಿ:
ಈ ಕ್ರಮವನ್ನು ಡ್ರಗ್ಸ್ (ಪ್ರೈಸ್ ಕಂಟ್ರೋಲ್) ಆದೇಶ–2013 (DPCO, 2013) ಅಡಿಯಲ್ಲಿ ಜಾರಿಗೆ ತರಲಾಗಿದೆ. ಔಷಧ ಕಂಪನಿಗಳು ಇನ್ನು ಮುಂದೆ ಎನ್ಪಿಪಿಎ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಈ ಔಷಧಿಗಳನ್ನು ಮಾರಾಟ ಮಾಡುವಂತಿಲ್ಲ. ಜೊತೆಗೆ ಹೊಸ ಬೆಲೆಗಳನ್ನು ಔಷಧಿಗಳ ಪ್ಯಾಕ್ಗಳ ಗರಿಷ್ಠ ಚಿಲ್ಲರೆ ಬೆಲೆ (MRP)ಯಲ್ಲಿ ಕೂಡಲೇ ಪರಿಷ್ಕರಿಸುವಂತೆ ಸೂಚಿಸಲಾಗಿದೆ.
ಮಧುಮೇಹ, ಬಿಪಿ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಸಾಮಾನ್ಯವಾಗಿ ವರ್ಷಗಳ ಕಾಲ ಅಥವಾ ಜೀವಮಾನವಿಡೀ ಔಷಧಿಗಳನ್ನು ಸೇವಿಸಬೇಕಾಗುತ್ತದೆ. ಸದ್ಯ ಗರಿಷ್ಠ ದರ ಮಿತಿ ನಿಗದಿಪಡಿಸಿರುವುದರಿಂದ ಔಷಧಿಗಳ ದರ ತುಸು ಪ್ರಮಾಣದಲ್ಲಿ ಇಳಿಕೆಯಾಗಲಿದೆ. ಇದರಿಂದ ತಿಂಗಳ ಹಾಗೂ ವಾರ್ಷಿಕ ವೆಚ್ಚದ ಲೆಕ್ಕದಲ್ಲಿ ಬಡ ಕುಟುಂಬಗಳಿಗೆ ಗಮನಾರ್ಹ ಉಳಿತಾಯವಾಗಲಿದೆ. ವಿಶೇಷವಾಗಿ ನಿವೃತ್ತರು, ಹಿರಿಯ ನಾಗರಿಕರು ಹಾಗೂ ಒಂದಕ್ಕಿಂತ ಹೆಚ್ಚು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಈ ನಿರ್ಧಾರ ನೆರವಾಗಲಿದೆ.
ಇದನ್ನೂ ಓದಿ:
ಮಧುಮೇಹ ಹಾಗೂ ಬಿಪಿ ಔಷಧಿಗಳ ಜೊತೆಗೆ ಕ್ಯಾಲ್ಸಿಯಂ ಮತ್ತು ವಿಟಮಿನ್-D3 ಮಾತ್ರೆಗಳ ಚಿಲ್ಲರೆ ದರವನ್ನು ಪ್ರತಿ ಮಾತ್ರೆಗೆ 8.93 (ಜಿಎಸ್ಟಿ ಸೇರಿ) ರೂ. ಎಂದು ಎನ್ಪಿಪಿಎ ನಿಗದಿಪಡಿಸಿದೆ. ಈ ಮಾತ್ರೆಗಳನ್ನು ಸಾಮಾನ್ಯವಾಗಿ ಹಿರಿಯ ನಾಗರಿಕರು, ಋತುಬಂಧದ ನಂತರದ ಮಹಿಳೆಯರು ಹಾಗೂ ಮೂಳೆ ದುರ್ಬಲತೆ ಇರುವವರಿಗೆ ವೈದ್ಯರು ಶಿಫಾರಸು ಮಾಡುತ್ತಾರೆ.
ನಾಯಿ ಅಥವಾ ರೇಬೀಸ್ ಶಂಕಿತ ಪ್ರಾಣಿಗಳ ಕಡಿತದ ಬಳಿಕ ತುರ್ತು ಚಿಕಿತ್ಸೆಯಲ್ಲಿ ಬಳಸುವ ಆ್ಯಂಟಿ-ರೇಬೀಸ್ ಇಮ್ಯುನೊಗ್ಲೋಬುಲಿನ್ ಇಂಜೆಕ್ಷನ್ನ ಚಿಲ್ಲರೆ ದರವನ್ನು 119.48 ರೂ.ಗೆ ಪರಿಷ್ಕರಿಸಲಾಗಿದೆ. ಈ ಔಷಧಿ ರೇಬೀಸ್ ಲಸಿಕೆಯೊಂದಿಗೆ ನೀಡಲಾಗುತ್ತಿದ್ದು, ಸೋಂಕಿನ ವಿರುದ್ಧ ತಕ್ಷಣದ ರಕ್ಷಣೆಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…