Featured

ಕೇಂದ್ರದಿಂದ ನೆರೆ ಪರಿಹಾರ ಹಣ ಬಂದೇ ಬರುತ್ತದೆ, ತಾಂತ್ರಿಕ ಕಾರಣಗಳಿಂದ ಪರಿಹಾರ ಹಣ ಬರುವುದು ತಡವಾಗಿದೆ : ಸುಮಲತಾ -Vishwanews24

ಮೈಸೂರು:ಕೇಂದ್ರದಿಂದ ನೆರೆ ಪರಿಹಾರ ಹಣ ಬಂದೇ ಬರುತ್ತದೆ, ತಾಂತ್ರಿಕ ಕಾರಣಗಳಿಂದ ಪರಿಹಾರ ಹಣ ಬರುವುದು ತಡವಾಗಿದೆ ಎಂದು ಸಂಸದೆ ಸುಮಲತಾ ಹೇಳಿದರು

ಮೈಸೂರಿನಲ್ಲಿ ಮಾತನಾಡಿದ ಸುಮಲತಾ ಅವರು, ಯಶ್ ಹಾಗೂ ದರ್ಶನ್ ಬರಬೇಕು ಎಂಬುದು ತುಂಬಾ ಚಿಕ್ಕ ವಿಷಯ. ಏಕೆಂದರೆ ಎಂಪಿಯಾಗಿ ಆಯ್ಕೆಯಾಗಿರುವುದು ನಾನು. ಯಶ್ ಹಾಗೂ ದರ್ಶನ್ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ನಮಗೆ ಬೆಂಬಲ ನೀಡಲು ಬರುತ್ತಾರೆ. ಸರ್ಕಾರದಲ್ಲಿ ಅವರಿಗೆ ಯಾವುದೇ ಅಧಿಕಾರ ಇಲ್ಲ. ಅವರು ಬಂದು ಏನೂ ಮಾಡುತ್ತಾರೆ. ನನ್ನ ಕೆಲಸ ನಾನು ಮಾಡಬೇಕು. ಯಶ್ ಹಾಗೂ ದರ್ಶನ್ ಮಂಡ್ಯಕ್ಕೆ ಬರುತ್ತಾರೆ. ಮೊದಲಿನಿಂದಲೂ ಅವರು ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರದ ನೆರೆ ಪರಿಹಾರ ಹಣ ನೀಡದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪರಿಹಾರ ಹಣ ಬಂದೇ ಬರುತ್ತದೆ. ಏನೋ ತಾಂತ್ರಿಕ ಕಾರಣ ಉಂಟಾಗಿದೆ. ಹೀಗಾಗಿ ಪರಿಹಾರ ಹಣ ಬರುವುದು ತಡವಾಗಿದೆ. ಆದರೆ ಪರಿಹಾರ ಹಣ ಬರುತ್ತೆ ಎಂಬ ವಿಶ್ವಾಸ ನನಗಿದೆ. ಜನರು ಪ್ರಶ್ನೆ ಮಾಡುತ್ತಿರುವುದು ಒಳ್ಳೆಯದು. ನಾವು ಯಾರ ಬಳಿ ಮಾತನಾಡಬೇಕೋ ಅವರ ಬಳಿ ಮಾತನಾಡುತ್ತಿದ್ದೇವೆ. ಅವರು ಇದೇ ಕಾರಣವನ್ನು ನೀಡುತ್ತಿದ್ದಾರೆ ಎಂದು ಸುಮಲತಾ ತಿಳಿಸಿದ್ದಾರೆ.

ನಾನು ಎಂಪಿ ಆಗಿರುವುದು ಜೆಡಿಎಸ್ ನಾಯಕರಿಗೆ ಉತ್ತರ ಕೊಡುವುದ್ದಕ್ಕೆ ಅಲ್ಲ. ನನ್ನ ಉತ್ತರ ಏನಿದ್ದರೂ ನನಗೆ ಮತ ನೀಡಿದ ಮಂಡ್ಯ ಜನತೆಗೆ ಮಾತ್ರ. ನಾನು ರಾಜಕೀಯವಾಗಿ ಮಾತನಾಡುವವರಿಗೆ ಉತ್ತರ ನೀಡಲ್ಲ. ಸುಮಕ್ಕ ಎಲ್ಲಿದ್ದಾರೆ ಎಂದು ಪ್ರಶ್ನೆ ಕೇಳುತ್ತಾರೆ. ನಾನು ಎಲ್ಲಿಯೂ ಹೋಗಿಲ್ಲ. ನಾನು ಇಲ್ಲಿಯೇ ಇದ್ದೀನಿ ಹಾಗೂ ನನ್ನ ಕೆಲಸ ಮಾಡುತ್ತಿದ್ದೇನೆ. ಯಾರಿಗೆ ಒತ್ತಡ ಹೇರಬೇಕೋ, ಯಾರ ಬಳಿ ಮನವಿ ಮಾಡಬೇಕೋ ಎಲ್ಲವನ್ನು ನಾನು ಮಾಡುತ್ತಿದ್ದೇನೆ ಎಂದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

10 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

10 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

10 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

11 hours ago