Featured

ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ 40 ಕೋಟಿ ರೂ. ಬಿಡುಗಡೆ : ಸದಾನಂದ ಗೌಡ -Vishwanews24

ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ 40 ಕೋಟಿ ರೂ. ಬಿಡುಗಡೆ : ಸದಾನಂದ ಗೌಡ -Vishwanews24

ಬೆಂಗಳೂರು : ”ಸ್ವಾವಲಂಬಿ ಭಾರತ ಯೋಜನೆಯಡಿ ದೇಶದಲ್ಲಿ ಪ್ಲಾಸ್ಟಿಕ್‌ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ದೇಶದಲ್ಲಿ ಎರಡು ಪ್ಲಾಸ್ಟಿಕ್‌ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ 40 ಕೋ.ರೂ. ನೀಡಲಾಗುತ್ತದೆ” ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದರು.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ”ಕರ್ನಾಟಕದ ಕರಾವಳಿ ನಗರ ಮಂಗಳೂರು ಹಾಗೂ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಒಂದೊಂದು ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪಿಸಲು ಇತ್ತೀಚೆಗೆ ನಡೆದ ರಾಸಾಯನಿಕ ಇಲಾಖೆಯ ಯೋಜನೆ ಚಾಲನಾ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಯೋಜನಾ ವೆಚ್ಚದ 50 ಪ್ರತಿಶತದಷ್ಟು ಹಣ 40 ಕೋಟಿ ರೂ. ಕೇಂದ್ರ ಸರ್ಕಾರವು ನೀಡಲಿದ್ದು ಉಳಿದ ಹಣವನ್ನು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ (ಕೆಎಸ್‌ಐಡಿಸಿ) ಯಂತಹ ಸಂಸ್ಥೆಗಳ ಮೂಲಕ ಅಥವಾ ನೂತನ ವಿಶೇಷ ಉದ್ದೇಶದೊಡನೆ ಪಡೆದುಕೊಳ್ಳಬಹುದು” ಎಂದು ಮಾಹಿತಿ ನೀಡಿದರು.

”ಯೋಜನೆಗಾಗಿ ಆರು ತಿಂಗಳಲ್ಲಿ ಅಂತಿಮ ಅನುಮತಿ ಪಡೆಯಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಆದ್ದರಿಂದ ಯೋಜನೆ ಯಾವ ವಿಳಂಬವಿಲ್ಲದೆ ಜಾರಿಯಾಗುವ ನಿರೀಕ್ಷೆ ಇದೆ” ಎಂದು ಹೇಳಿದರು.

”ವಿವಿಧ ಕಾರಣಗಳಿಗಾಗಿ ಸ್ಥಗಿತಗೊಂಡಿದ್ದ ನಾಲ್ಕು ರಸಗೊಬ್ಬರ ಕಾರ್ಖಾನೆಗಳನ್ನು ಪುನಶ್ಚೇತನ ಮಾಡಲಾಗುತ್ತಿದೆ. ಇದಕ್ಕಾಗಿ 50 ಸಾವಿರ ಕೋಟಿ ರೂಪಾಯಿಗಿಂತ ಅಧಿಕ ವೆಚ್ಚವಾಗುತ್ತದೆ. ಈ ಪೈಕಿ ರಾಮಗುಂಡಮ್‌ ಸ್ಥಾವರದ ಕೆಲಸ ಬಹುತೇಕ ಮುಗಿದಿದೆ” ಎಂದು ಹೇಳಿದರು.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

4 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

30 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

34 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

40 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

52 minutes ago

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

18 hours ago