Featured

ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ 40 ಕೋಟಿ ರೂ. ಬಿಡುಗಡೆ : ಸದಾನಂದ ಗೌಡ -Vishwanews24

ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ 40 ಕೋಟಿ ರೂ. ಬಿಡುಗಡೆ : ಸದಾನಂದ ಗೌಡ -Vishwanews24

ಬೆಂಗಳೂರು : ”ಸ್ವಾವಲಂಬಿ ಭಾರತ ಯೋಜನೆಯಡಿ ದೇಶದಲ್ಲಿ ಪ್ಲಾಸ್ಟಿಕ್‌ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ದೇಶದಲ್ಲಿ ಎರಡು ಪ್ಲಾಸ್ಟಿಕ್‌ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ 40 ಕೋ.ರೂ. ನೀಡಲಾಗುತ್ತದೆ” ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದರು.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ”ಕರ್ನಾಟಕದ ಕರಾವಳಿ ನಗರ ಮಂಗಳೂರು ಹಾಗೂ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಒಂದೊಂದು ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪಿಸಲು ಇತ್ತೀಚೆಗೆ ನಡೆದ ರಾಸಾಯನಿಕ ಇಲಾಖೆಯ ಯೋಜನೆ ಚಾಲನಾ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್‌ಗೆ ಯೋಜನಾ ವೆಚ್ಚದ 50 ಪ್ರತಿಶತದಷ್ಟು ಹಣ 40 ಕೋಟಿ ರೂ. ಕೇಂದ್ರ ಸರ್ಕಾರವು ನೀಡಲಿದ್ದು ಉಳಿದ ಹಣವನ್ನು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ (ಕೆಎಸ್‌ಐಡಿಸಿ) ಯಂತಹ ಸಂಸ್ಥೆಗಳ ಮೂಲಕ ಅಥವಾ ನೂತನ ವಿಶೇಷ ಉದ್ದೇಶದೊಡನೆ ಪಡೆದುಕೊಳ್ಳಬಹುದು” ಎಂದು ಮಾಹಿತಿ ನೀಡಿದರು.

”ಯೋಜನೆಗಾಗಿ ಆರು ತಿಂಗಳಲ್ಲಿ ಅಂತಿಮ ಅನುಮತಿ ಪಡೆಯಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಆದ್ದರಿಂದ ಯೋಜನೆ ಯಾವ ವಿಳಂಬವಿಲ್ಲದೆ ಜಾರಿಯಾಗುವ ನಿರೀಕ್ಷೆ ಇದೆ” ಎಂದು ಹೇಳಿದರು.

”ವಿವಿಧ ಕಾರಣಗಳಿಗಾಗಿ ಸ್ಥಗಿತಗೊಂಡಿದ್ದ ನಾಲ್ಕು ರಸಗೊಬ್ಬರ ಕಾರ್ಖಾನೆಗಳನ್ನು ಪುನಶ್ಚೇತನ ಮಾಡಲಾಗುತ್ತಿದೆ. ಇದಕ್ಕಾಗಿ 50 ಸಾವಿರ ಕೋಟಿ ರೂಪಾಯಿಗಿಂತ ಅಧಿಕ ವೆಚ್ಚವಾಗುತ್ತದೆ. ಈ ಪೈಕಿ ರಾಮಗುಂಡಮ್‌ ಸ್ಥಾವರದ ಕೆಲಸ ಬಹುತೇಕ ಮುಗಿದಿದೆ” ಎಂದು ಹೇಳಿದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

16 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

17 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

17 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

17 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

17 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

18 hours ago