ಕಾಪು ತಾಲೂಕು ಮಟ್ಟದ ಜನಸಂಪರ್ಕ ಸಭೆ .
ಕಾಪು: ಕಾಪು ತಾಲೂಕು ಮಟ್ಟದ ಜನಸಂಪರ್ಕ ಸಭೆಯು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಅವರ ಉಪಸ್ಥಿತಿಯಲ್ಲಿ ಕಾಪು ಲಕ್ಷ್ಮಿ ಜನಾರ್ಧನ ದೇಗುಲದ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್ ಮಾತಾಡಿ” ರಾಜ್ಯದಲ್ಲಿ ಉಲ್ಬಣಗೊಂಡಿರುವ ನೆರೆ ಮತ್ತು ಬರಕ್ಕೆ ಪೂರಕವಾದ ವ್ಯವಸ್ಥೆಯನ್ನ ಕಲ್ಪಿಸುವಲ್ಲಿ ಸರ್ಕಾರ ಬದ್ದವಾಗಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ನಡೆಯುತ್ತಿದೆ ಆದರೆ ಕೇಂದ್ರದಿಂದ ಮಾತ್ರ ಕೇವಲ ಸಾಂಕೇತಿಕ ಪರಿಹಾರ ಘೋಷನೆಯಾಗಿದೆ ಮುಂದಿನ ದಿನದಲ್ಲಿ ಹೆಚ್ಚಿನ ಪರಿಹಾರ ನೀಡುವ ಭರವಸೆ ಇದೆ ಎಂದರು.
ಕಾಪು ತಾಲ್ಲೂಕು ಮಟ್ಟದಲ್ಲಿ ಅಗತ್ಯವಿರುವ ಎಲ್ಲಾ ಇಲಾಖೆಗಳನ್ನ ಸನ್ನದುಗೊಳಿಸುವವಲ್ಲಿ ಸತತ ಪ್ರಯತ್ನಗಳು ನಡೆಯುತ್ತಿದೆ ಅದರ ಜತೆಗೆ ಕೇಂದ್ರದ ಯೋಜನೆಗಳನ್ನ ಜನಸಾಮಾನ್ಯರಿಗೆ ಮುಟ್ಟಿಸುವ ಪ್ರಯತ್ನ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.
ಕಸ ವಿಲೇವಾರಿಗೆ ಹೆಚ್ಚಿನ ಒತ್ತನ್ನು ನೀಡುವ ಮುಖಾಂತರ ಮತ್ತು ಆದಷ್ಟು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೇರಿದ ಜನಸ್ತೋಮದಲ್ಲಿ ವಿನಂತಿಸಿದರು.
ಮುಂದಿನ ದಿನದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಈಗಾಗಲೇ ಸೂಕ್ತ ಕ್ರಮದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಿಂದ ಕ್ರಮ ಕೈಗೊಳ್ಳವ ಪ್ರಯತ್ನ ಕೂಡ ನಡೆಯುತ್ತಿದೆ ಎಂದರು.
ಇದೇ ಸಂಧರ್ಭದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ತಾಲೂಕು ಪಂಚಾಯತ್ ಸದಸ್ಯರು,ಜಿಲ್ಲಾ ಪಂಚಾಯತ್ ಸದಸ್ಯರು ಉಪಸ್ಥಿತಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…