ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸುವುದಾಗಿ ಮಂಗಳವಾರ(ಜನವರಿ 12, 2021) ಸುಪ್ರೀಂಕೋರ್ಟ್ ತಿಳಿಸಿದ್ದು, ಅಲ್ಲದೇ ಮೂರು ವಿವಾದಿತ ಕೃಷಿ ಕಾಯ್ದೆ ಜಾರಿಗೆ ತಾತ್ಕಾಲಿಕವಾಗಿ ತಡೆ ನೀಡಿ ಮಹತ್ವದ ಆದೇಶ ನೀಡಿದೆ.
“ಇದೊಂದು ಸಾವು-ಬದುಕಿನ ವಿಷಯವಾಗಿದೆ. ನಮಗೆ ಕಾಯ್ದೆ ಬಗ್ಗೆಯೂ ಕಾಳಜಿ ಇದೆ, ಅದೇ ರೀತಿ ಪ್ರತಿಭಟನೆಯಿಂದಾಗುವ ಜೀವಹಾನಿ ಮತ್ತು ಆಸ್ತಿ ಹಾನಿ ಬಗ್ಗೆಯೂ ಕಳವಳ ಇದೆ. ಅದಕ್ಕಾಗಿ ಉತ್ತಮ ರೀತಿಯಲ್ಲಿ ಸಮಸ್ಯೆಯನ್ನು ಬಗೆಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಈ ಕಾಯ್ದೆಯನ್ನು ತಡೆ ಹಿಡಿಯುವ (ರದ್ದು) ಅಧಿಕಾರ ಕೂಡಾ ನಮಗಿದೆ” ಎಂದು ಸಿಜೆಐ ಎಸ್ ಎ ಬೋಬ್ಡೆ ತಿಳಿಸಿದರು.
ಮುಂದಿನ ಆದೇಶ ನೀಡುವವರೆಗೆ ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಅಲ್ಲದೇ ನಾಲ್ವರು ಕೃಷಿ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸುವುದಾಗಿ ತಿಳಿಸಿದೆ. ಸಮಿತಿಯ ಸದಸ್ಯರು ಪ್ರತಿಭಟನಾಕಾರರು ಮತ್ತು ಕೇಂದ್ರದ ಜತೆ ಮಾತುಕತೆ ನಡೆಸಲಿದೆ ಎಂದು ಆದೇಶ ನೀಡಿದೆ.
ಸಮಿತಿ ಸುಪ್ರೀಂಕೋರ್ಟ್ ಗೆ ವರದಿಯನ್ನು ನೀಡಲಿದೆ. ಸಮಿತಿಗೆ ರೈತರು ಸಹಕಾರ ನೀಡಬೇಕು. ಆದರೆ ನ್ಯಾಯಾಂಗದ ಪ್ರಕ್ರಿಯೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂದು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.
ಕೃಷಿ ಆರ್ಥಿಕ ತಜ್ಞ ಅಶೋಕ್ ಗುಲಾಟಿ, ಜಿತೇಂದ್ರ ಸಿಂಗ್ ಮಾನ್, ಅನಿಲ್ ಧನ್ವತ್ ಹಾಗೂ ಡಾ.ಪಿ.ಕೆ ಜೋಶಿ ಅವರನ್ನೊಳಗೊಂಡ ತಜ್ಞರ ಸಮಿತಿಯನ್ನು ಸುಪ್ರೀಂಕೋರ್ಟ್ ನೇಮಕ ಮಾಡಿದೆ.
ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ರೈತ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಜನವರಿ 26 ಗಣರಾಜ್ಯೋತ್ಸವದಂದು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕಟರ್ ರಾಲಿಯನ್ನು ಕೈಬಿಡುವಂತೆ ಸೂಚಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…