Featured

ಕೇಂದ್ರ ಬಜೆಟ್  ಇದು ಕಾಂಗ್ರೆಸ್ ಪ್ರಣಾಳಿಕೆ  : ಕಾಂಗ್ರೆಸ್ ನಾಯಕರ ಟೀಕೆ – vishwanews24

ಕೇಂದ್ರ ಬಜೆಟ್  ಇದು ಕಾಂಗ್ರೆಸ್ ಪ್ರಣಾಳಿಕೆ  : ಕಾಂಗ್ರೆಸ್ ನಾಯಕರ ಟೀಕೆ

ದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ 2024-25 ಅನ್ನು ಮಂಡಿಸಿದ್ದು, ಇದು ಕಾಂಗ್ರೆಸ್ ಪ್ರಣಾಳಿಕೆ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಟೀಕಿಸಿದ್ದಾರೆ.

ಮಾಜಿ ಕೇಂದ್ರ ಹಣಕಾಸು ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಮಾಡಿದ ಪೋಸ್ಟ್ ನಲ್ಲಿ ಲೋಕಸಭಾ ಚುನಾವಣಾ ಫಲಿತಾಂಶಗಳ ನಂತರ ಮಾನ್ಯ ವಿತ್ತ ಸಚಿವೆ, ಕಾಂಗ್ರೆಸ್ ಪ್ರಣಾಳಿಕೆಯನ್ನು ಓದಿದ್ದಾರೆ ಎಂದು ತಿಳಿದು ನನಗೆ ಸಂತೋಷವಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿತ್ತ ಸಚಿವೆ ಇತರ ಕೆಲವು ವಿಚಾರಗಳನ್ನು ನಕಲು ಮಾಡಬೇಕಿತ್ತು ಎಂದು ನಾನು ಬಯಸುತ್ತೇನೆ. ಅವರಿಗೆ ಬಿಟ್ಟು ಹೋಗಿರುವುದನ್ನು ಅವಕಾಶಗಳನ್ನು ನಾನು ಶೀಘ್ರದಲ್ಲೇ ಪಟ್ಟಿ ಮಾಡುತ್ತೇನೆ ಎಂದು ಚಿದಂಬರಂ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಕೊನೆಗೂ ಸಾಮೂಹಿಕ ನಿರುದ್ಯೋಗ ರಾಷ್ಟ್ರೀಯ ಬಿಕ್ಕಟ್ಟು ಎಂದು ಒಪ್ಪಿಕೊಳ್ಳುವುದು ತುರ್ತು ಗಮನದ ಅಗತ್ಯವಿದೆ ಇದು ತುಂಬಾ ತಡವಾಗಿದೆ ಎಂದಿದ್ದಾರೆ.ಈ ಬಜೆಟ್ ಹೆಚ್ಚು ಕಡಿಮೆ ಕಾಂಗ್ರೆಸ್ ಪ್ರಣಾಳಿಕೆಯನ್ನು ನಕಲು ಮಾಡಿದೆ. ಪ್ರಮುಖ ವಿಷಯವೆಂದರೆ ಯುವ ನಿಧಿ ಯೋಜನೆ ಬಗ್ಗೆ ಈ ಸರ್ಕಾರವು ಅಪ್ರೆಸೆಂಟಿಶಿಪ್ ಯುವಕರಿಗೆ ₹ 5000 ಘೋಷಿಸಿದೆ. ಈ ಸರ್ಕಾರವು ರಾಹುಲ್ ಗಾಂಧಿಯವರ ಆಲೋಚನೆಗಳನ್ನು ನಕಲು ಮಾಡಿದೆ ಎಂದು ತೋರಿಸುತ್ತದೆ. ಆಂಧ್ರಪ್ರದೇಶಕ್ಕೆ ಲಾಲಿಪಾಪ್ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಭಾಷಣವನ್ನು ‘ಕುರ್ಸಿ ಬಚಾವೋ ಬಜೆಟ್ ಎಂದು ಟೀಕಿಸಿದ್ದಾರೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago