ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಶನಿವಾರ) ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದು, ಇದಕ್ಕೆ ಮುನ್ನ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.
ಈ ವೇಳೆ ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಮತ್ತು ಮುಖ್ಯ ಆರ್ಥಿಕ ಸಲಹೆಗಾರ ಡಾ ವಿ ಅನಂತ ನಾಗೇಶ್ವರನ್ ಸಚಿವರಿಗೆ ಸಾಥ್ ನೀಡಿದ್ದಾರೆ.
ಬಿಳಿ ರೇಷ್ಮೆ ಸೀರೆಯನ್ನು ಧರಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ದಾಖಲೆಗಳನ್ನು ಹೊಂದಿದ ಟ್ಯಾಬ್ಲೆಟ್ ನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದ್ದಾರೆ. ಚಿನ್ನದ ಬಣ್ಣದ ರಾಷ್ಟ್ರೀಯ ಲಾಂಛನವನ್ನು ಹೊಂದಿರುವ ಕೆಂಪು ಕವರ್ ನೊಳಗೆ ಟ್ಯಾಬ್ಲೆಟ್ ನ್ನು ಭದ್ರತೆಯಿಂದ ಇರಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಇದುವರೆಗೆ 7 ಬಜೆಟ್ ಮಂಡಿಸಿದ್ದಾರೆ. ಇಂದು 8ನೇ ಬಜೆಟ್ ಮಂಡಿಸಿ ದಾಖಲೆ ಬರೆಯಲಿದ್ದಾರೆ. 2019, 2020, 2021, 2022, 2023, 2024 (ಮಧ್ಯಂತರ ಬಜೆಟ್), 2024 (ಪೂರ್ಣ ಬಜೆಟ್) ಅವಧಿಯಲ್ಲಿ ಬಜೆಟ್ ಮಂಡಿಸಿದ್ದಾರೆ
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…