ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಶನಿವಾರ) ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದು, ಇದಕ್ಕೆ ಮುನ್ನ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.
ಈ ವೇಳೆ ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಮತ್ತು ಮುಖ್ಯ ಆರ್ಥಿಕ ಸಲಹೆಗಾರ ಡಾ ವಿ ಅನಂತ ನಾಗೇಶ್ವರನ್ ಸಚಿವರಿಗೆ ಸಾಥ್ ನೀಡಿದ್ದಾರೆ.
ಬಿಳಿ ರೇಷ್ಮೆ ಸೀರೆಯನ್ನು ಧರಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ದಾಖಲೆಗಳನ್ನು ಹೊಂದಿದ ಟ್ಯಾಬ್ಲೆಟ್ ನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದ್ದಾರೆ. ಚಿನ್ನದ ಬಣ್ಣದ ರಾಷ್ಟ್ರೀಯ ಲಾಂಛನವನ್ನು ಹೊಂದಿರುವ ಕೆಂಪು ಕವರ್ ನೊಳಗೆ ಟ್ಯಾಬ್ಲೆಟ್ ನ್ನು ಭದ್ರತೆಯಿಂದ ಇರಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಇದುವರೆಗೆ 7 ಬಜೆಟ್ ಮಂಡಿಸಿದ್ದಾರೆ. ಇಂದು 8ನೇ ಬಜೆಟ್ ಮಂಡಿಸಿ ದಾಖಲೆ ಬರೆಯಲಿದ್ದಾರೆ. 2019, 2020, 2021, 2022, 2023, 2024 (ಮಧ್ಯಂತರ ಬಜೆಟ್), 2024 (ಪೂರ್ಣ ಬಜೆಟ್) ಅವಧಿಯಲ್ಲಿ ಬಜೆಟ್ ಮಂಡಿಸಿದ್ದಾರೆ
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…