ನವದೆಹಲಿ: ಮುಂದಿನ ಹಣಕಾಸು ವರ್ಷ(2020-21) ಬರೋಬ್ಬರಿ 15 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲ ವಿತರಣೆಯ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸಂಸತ್ತಿನಲ್ಲಿ ಬಜೆಟ್ ಮಂಡಿಸುತ್ತ ಈ ವಿಚಾರ ಹೇಳಿದ್ದು, ನಬಾರ್ಡ್ನ ರೀಫೈನಾನ್ಸ್ ಸ್ಕೀಮ್ ಕೂಡ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಭಾರತೀಯ ರೈಲ್ವೆ ಪಿಪಿಪಿ(ಪಬ್ಲಿಕ್-ಪ್ರೈವೇಟ್ ಪಾರ್ಟ್ನರ್ಷಿಪ್) ಮಾದರಿಯಲ್ಲಿ ಕಿಸಾನ್ ರೈಲ್ ಅನ್ನು ಆರಂಭಿಸಲಿದೆ. ಇದು ಬೇಗನೆ ಹಾಳಾಗುವ ಕೃಷಿ ಉತ್ಪನ್ನಗಳ ಸಾಗಣೆಗೆ ಇದು ಕೋಲ್ಡ್ ಸಪ್ಲೈ ಚೇನ್ ಆಗಿ ಬಳಕೆಯಾಗಲಿದೆ ಎಂದು ಅವರು ವಿವರಿಸಿದರು.
ಇದರ ಜತೆಗೆ, ಕೃಷಿ ಉಡಾನ್ ಎಂಬ ಯೋಜನೆಯನ್ನೂ ನಾಗರಿಕ ವಿಮಾನ ಯಾನ ಸಚಿವಾಲಯ ಆರಂಭಿಸಲಿದೆ. ಕೃಷಿ ಉತ್ಪನ್ನವನ್ನು ರಾಷ್ಟ್ರಮಟ್ಟ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಾಗಿಸಲು ಈ ಯೋಜನೆ ನೆರವಾಗಲಿದೆ ಎಂದರು.
ಕ್ಲಸ್ಟರ್ ಆಧಾರದಲ್ಲಿ ಒಂದು ಜಿಲ್ಲೆಯಲ್ಲಿ ಒಂದು ತೋಟಗಾರಿಕೆ ಬೆಳೆ ಎಂಬ ಮಾದರಿಯ ಯೋಜನೆಯನ್ನು ಸರ್ಕಾರ ಉತ್ತೇಜಿಸಲಿದೆ. ಈ ರೀತಿಯ ಪ್ರಯೋಗದಿಂದ ಆಹಾರ ಧಾನ್ಯಗಳ ಉತ್ಪಾದನೆ 311 ಎಂಟಿ ದಾಟಿದೆ ಎಂದು ಅವರು ಹೇಳಿದರು.
ಅದೇ ರೀತಿ, ಸಮುದ್ರ ಮೀನುಗಾರಿಕೆ ಸಂರಕ್ಷಣೆ, ಕೃಷಿ ಉತ್ಪನ್ನ ಉಗ್ರಾಣ ಸೌಕರ್ಯ ವೃದ್ಧಿಗೆ ಸ್ವ ಸಹಾಯ ಸಂಘಗಳಿಗೆ ಅನುವು ಮಾಡಿಕೊಡುವ ಕ್ರಮವನ್ನೂ ಸರ್ಕಾರ ಮಾಡಲಿದೆ ಎಂದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…