ಕೇಂದ್ರ ಬಜೆಟ್ :15 ಲಕ್ಷ ಕೋಟಿ ರೂ. ಕೃಷಿ ಸಾಲ ವಿತರಣೆ ಗುರಿ, ಕಿಸಾನ್​ ರೈಲು, ಕೃಷಿ ಉಡಾನ್ ಯೋಜನೆ ಜಾರಿ -Vishwanews24

ನವದೆಹಲಿ: ಮುಂದಿನ ಹಣಕಾಸು ವರ್ಷ(2020-21) ಬರೋಬ್ಬರಿ 15 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲ ವಿತರಣೆಯ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸಂಸತ್ತಿನಲ್ಲಿ ಬಜೆಟ್ ಮಂಡಿಸುತ್ತ ಈ ವಿಚಾರ ಹೇಳಿದ್ದು, ನಬಾರ್ಡ್​ನ ರೀಫೈನಾನ್ಸ್​ ಸ್ಕೀಮ್​​ ಕೂಡ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಭಾರತೀಯ ರೈಲ್ವೆ ಪಿಪಿಪಿ(ಪಬ್ಲಿಕ್​-ಪ್ರೈವೇಟ್​ ಪಾರ್ಟ್​ನರ್​ಷಿಪ್​) ಮಾದರಿಯಲ್ಲಿ ಕಿಸಾನ್​ ರೈಲ್ ಅನ್ನು ಆರಂಭಿಸಲಿದೆ. ಇದು ಬೇಗನೆ ಹಾಳಾಗುವ ಕೃಷಿ ಉತ್ಪನ್ನಗಳ ಸಾಗಣೆಗೆ ಇದು ಕೋಲ್ಡ್​ ಸಪ್ಲೈ ಚೇನ್​ ಆಗಿ ಬಳಕೆಯಾಗಲಿದೆ ಎಂದು ಅವರು ವಿವರಿಸಿದರು.

ಇದರ ಜತೆಗೆ, ಕೃಷಿ ಉಡಾನ್​ ಎಂಬ ಯೋಜನೆಯನ್ನೂ ನಾಗರಿಕ ವಿಮಾನ ಯಾನ ಸಚಿವಾಲಯ ಆರಂಭಿಸಲಿದೆ. ಕೃಷಿ ಉತ್ಪನ್ನವನ್ನು ರಾಷ್ಟ್ರಮಟ್ಟ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಾಗಿಸಲು ಈ ಯೋಜನೆ ನೆರವಾಗಲಿದೆ ಎಂದರು.

ಕ್ಲಸ್ಟರ್​ ಆಧಾರದಲ್ಲಿ ಒಂದು ಜಿಲ್ಲೆಯಲ್ಲಿ ಒಂದು ತೋಟಗಾರಿಕೆ ಬೆಳೆ ಎಂಬ ಮಾದರಿಯ ಯೋಜನೆಯನ್ನು ಸರ್ಕಾರ ಉತ್ತೇಜಿಸಲಿದೆ. ಈ ರೀತಿಯ ಪ್ರಯೋಗದಿಂದ ಆಹಾರ ಧಾನ್ಯಗಳ ಉತ್ಪಾದನೆ 311 ಎಂಟಿ ದಾಟಿದೆ ಎಂದು ಅವರು ಹೇಳಿದರು.

ಅದೇ ರೀತಿ, ಸಮುದ್ರ ಮೀನುಗಾರಿಕೆ ಸಂರಕ್ಷಣೆ, ಕೃಷಿ ಉತ್ಪನ್ನ ಉಗ್ರಾಣ ಸೌಕರ್ಯ ವೃದ್ಧಿಗೆ ಸ್ವ ಸಹಾಯ ಸಂಘಗಳಿಗೆ ಅನುವು ಮಾಡಿಕೊಡುವ ಕ್ರಮವನ್ನೂ ಸರ್ಕಾರ ಮಾಡಲಿದೆ ಎಂದರು.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago