ನವದೆಹಲಿ: ಮುಂದಿನ ಹಣಕಾಸು ವರ್ಷ(2020-21) ಬರೋಬ್ಬರಿ 15 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲ ವಿತರಣೆಯ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸಂಸತ್ತಿನಲ್ಲಿ ಬಜೆಟ್ ಮಂಡಿಸುತ್ತ ಈ ವಿಚಾರ ಹೇಳಿದ್ದು, ನಬಾರ್ಡ್ನ ರೀಫೈನಾನ್ಸ್ ಸ್ಕೀಮ್ ಕೂಡ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಭಾರತೀಯ ರೈಲ್ವೆ ಪಿಪಿಪಿ(ಪಬ್ಲಿಕ್-ಪ್ರೈವೇಟ್ ಪಾರ್ಟ್ನರ್ಷಿಪ್) ಮಾದರಿಯಲ್ಲಿ ಕಿಸಾನ್ ರೈಲ್ ಅನ್ನು ಆರಂಭಿಸಲಿದೆ. ಇದು ಬೇಗನೆ ಹಾಳಾಗುವ ಕೃಷಿ ಉತ್ಪನ್ನಗಳ ಸಾಗಣೆಗೆ ಇದು ಕೋಲ್ಡ್ ಸಪ್ಲೈ ಚೇನ್ ಆಗಿ ಬಳಕೆಯಾಗಲಿದೆ ಎಂದು ಅವರು ವಿವರಿಸಿದರು.
ಇದರ ಜತೆಗೆ, ಕೃಷಿ ಉಡಾನ್ ಎಂಬ ಯೋಜನೆಯನ್ನೂ ನಾಗರಿಕ ವಿಮಾನ ಯಾನ ಸಚಿವಾಲಯ ಆರಂಭಿಸಲಿದೆ. ಕೃಷಿ ಉತ್ಪನ್ನವನ್ನು ರಾಷ್ಟ್ರಮಟ್ಟ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಾಗಿಸಲು ಈ ಯೋಜನೆ ನೆರವಾಗಲಿದೆ ಎಂದರು.
ಕ್ಲಸ್ಟರ್ ಆಧಾರದಲ್ಲಿ ಒಂದು ಜಿಲ್ಲೆಯಲ್ಲಿ ಒಂದು ತೋಟಗಾರಿಕೆ ಬೆಳೆ ಎಂಬ ಮಾದರಿಯ ಯೋಜನೆಯನ್ನು ಸರ್ಕಾರ ಉತ್ತೇಜಿಸಲಿದೆ. ಈ ರೀತಿಯ ಪ್ರಯೋಗದಿಂದ ಆಹಾರ ಧಾನ್ಯಗಳ ಉತ್ಪಾದನೆ 311 ಎಂಟಿ ದಾಟಿದೆ ಎಂದು ಅವರು ಹೇಳಿದರು.
ಅದೇ ರೀತಿ, ಸಮುದ್ರ ಮೀನುಗಾರಿಕೆ ಸಂರಕ್ಷಣೆ, ಕೃಷಿ ಉತ್ಪನ್ನ ಉಗ್ರಾಣ ಸೌಕರ್ಯ ವೃದ್ಧಿಗೆ ಸ್ವ ಸಹಾಯ ಸಂಘಗಳಿಗೆ ಅನುವು ಮಾಡಿಕೊಡುವ ಕ್ರಮವನ್ನೂ ಸರ್ಕಾರ ಮಾಡಲಿದೆ ಎಂದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…