Featured

ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ : 10 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಉಲ್ಲೇಖ – vishwanews24

ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ ; 10 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಉಲ್ಲೇಖ

ಬೆಂಗಳೂರು: ಪದೇಪದೇ ಪಕ್ಷದ ನಾಯಕತ್ವದ ಕುರಿತು ಮುಜುಗರ ತರುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕೇಂದ್ರ ಬಿಜೆಪಿ ಶಿಸ್ತುಸಮಿತಿ  ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಈ ಮೂಲಕ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಹತ್ತು ದಿನಗಳೊಳಗೆ ಸ್ಪಷ್ಟೀಕರಣ ಕೊಡದಿದ್ದಲ್ಲಿ ನಿಮ್ಮ ತಪ್ಪು ನೀವೇ ಒಪ್ಪಿಕೊಂಡಂತೆ. ನಾವು ಕ್ರಮಕ್ಕೆ ಮುಂದಾಗಲು ನಿಮ್ಮ ಒಪ್ಪಿಗೆ ಇದೆಯೆಂದು ಭಾವಿಸುತ್ತೇವೆ. ಈ ಹಿಂದೆಯೂ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ತಪ್ಪು ಸರಿಪಡಿಸಿಕೊಳ್ಳೋದಾಗಿ ಭರವಸೆ ಕೊಟ್ಟಿದ್ದಿರಿ. ಆದರೆ ಯಾವುದೂ ಬದಲಾವಣೆ ಆಗಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಹೈಕಮಾಂಡ್ ನಮ್ಮ ಪರ ಇದೆ ಎನ್ನುತ್ತಿದ್ದ ಯತ್ನಾಳ್ ತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ಸದ್ಯಕ್ಕೆ ವಿಜಯೇಂದ್ರ ಮೇಲುಗೈ ಸಾಧಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ನೀಡಿದ್ದ ಬಹಿರಂಗ ಹೇಳಿಕೆಗಳ ಕುರಿತು ಹೈಕಮಾಂಡ್ ಗರಂ ಆಗಿದೆ. ಇದೀಗ ಶೋಕಾಸ್ ನೊಟೀಸ್  ಜಾರಿಯಾದ ಹಿನ್ನೆಲೆ ಯತ್ನಾಳ್ ಶೋಕಾಸ್ ನೊಟೀಸ್‌ಗೆ ಉತ್ತರ ಕೊಡುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಉತ್ತರ ಕೊಡುತ್ತೇನೆ. ಹಾಗೆಯೇ ರಾಜ್ಯ ಬಿಜೆಪಿಯ ವಸ್ತುಸ್ಥಿತಿಯನ್ನೂ ವರಿಷ್ಠರಿಗೆ ತಿಳಿಸೋದಾಗಿ ಯತ್ನಾಳ್ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನು ಸೋಮವಾರ ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಅವರಿಗೆ ವಕ್ಫ್ ವಿರೋಧಿ ಜನಜಾಗೃತಿ ವರದಿ ಸಲ್ಲಿಸುವ ಸಲುವಾಗಿ ಭಾನುವಾರವೇ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ಇಂದು (ಸೋಮವಾರ) ಉಳಿದ ರೆಬೆಲ್ ನಾಯಕರು ಯತ್ನಾಳ್‌ರನ್ನು ಕೂಡಿಕೊಳ್ಳಲಿದ್ದಾರೆ.‌

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago