ಬೆಂಗಳೂರು: ಪದೇಪದೇ ಪಕ್ಷದ ನಾಯಕತ್ವದ ಕುರಿತು ಮುಜುಗರ ತರುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತುಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಈ ಮೂಲಕ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಹತ್ತು ದಿನಗಳೊಳಗೆ ಸ್ಪಷ್ಟೀಕರಣ ಕೊಡದಿದ್ದಲ್ಲಿ ನಿಮ್ಮ ತಪ್ಪು ನೀವೇ ಒಪ್ಪಿಕೊಂಡಂತೆ. ನಾವು ಕ್ರಮಕ್ಕೆ ಮುಂದಾಗಲು ನಿಮ್ಮ ಒಪ್ಪಿಗೆ ಇದೆಯೆಂದು ಭಾವಿಸುತ್ತೇವೆ. ಈ ಹಿಂದೆಯೂ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ತಪ್ಪು ಸರಿಪಡಿಸಿಕೊಳ್ಳೋದಾಗಿ ಭರವಸೆ ಕೊಟ್ಟಿದ್ದಿರಿ. ಆದರೆ ಯಾವುದೂ ಬದಲಾವಣೆ ಆಗಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಹೈಕಮಾಂಡ್ ನಮ್ಮ ಪರ ಇದೆ ಎನ್ನುತ್ತಿದ್ದ ಯತ್ನಾಳ್ ತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ಸದ್ಯಕ್ಕೆ ವಿಜಯೇಂದ್ರ ಮೇಲುಗೈ ಸಾಧಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ನೀಡಿದ್ದ ಬಹಿರಂಗ ಹೇಳಿಕೆಗಳ ಕುರಿತು ಹೈಕಮಾಂಡ್ ಗರಂ ಆಗಿದೆ. ಇದೀಗ ಶೋಕಾಸ್ ನೊಟೀಸ್ ಜಾರಿಯಾದ ಹಿನ್ನೆಲೆ ಯತ್ನಾಳ್ ಶೋಕಾಸ್ ನೊಟೀಸ್ಗೆ ಉತ್ತರ ಕೊಡುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಉತ್ತರ ಕೊಡುತ್ತೇನೆ. ಹಾಗೆಯೇ ರಾಜ್ಯ ಬಿಜೆಪಿಯ ವಸ್ತುಸ್ಥಿತಿಯನ್ನೂ ವರಿಷ್ಠರಿಗೆ ತಿಳಿಸೋದಾಗಿ ಯತ್ನಾಳ್ ಎಕ್ಸ್ನಲ್ಲಿ ಮಾಹಿತಿ ನೀಡಿದ್ದಾರೆ.
ಇನ್ನು ಸೋಮವಾರ ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಅವರಿಗೆ ವಕ್ಫ್ ವಿರೋಧಿ ಜನಜಾಗೃತಿ ವರದಿ ಸಲ್ಲಿಸುವ ಸಲುವಾಗಿ ಭಾನುವಾರವೇ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ಇಂದು (ಸೋಮವಾರ) ಉಳಿದ ರೆಬೆಲ್ ನಾಯಕರು ಯತ್ನಾಳ್ರನ್ನು ಕೂಡಿಕೊಳ್ಳಲಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…