ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಮೊದಲ ಬೃಹತ್ ಸಂಪುಟ ಪುರ್ನರಚನೆಯ ಮುನ್ನ ಸಚಿವರಾದ ಡಿವಿ ಸದಾನಂದಗೌಡ ಸೇರಿದಂತೆ ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ನಿಶಾಂಕ್ ಹಾಗೂ ದೇಬಶ್ರೀ ಚೌಧರಿ ಅವರು ಬುಧವಾರ ರಾಜೀನಾಮೆ ನೀಡಿದ್ದಾರೆ.
ಜ್ಯೋತಿರಾಧಿತ್ಯ ಸಿಂಧಿಯಾ ಸೇರಿದಂತೆ ಸರ್ಬಾನಂದ ಸೋನೊವಾಲ್, ನಾರಾಯಣ್ ರಾಣೆ ಹಾಗೂ ಪಶುಪತಿನಾಥ್ ರಾಸ್ ಅವರ ಹೆಸರುಗಳು ನೂತನ ಸಂಪುಟಕ್ಕೆ ಸೇರ್ಪಡೆಯಾಗಲಿವೆ ಎಂದು ಕೇಳಿ ಬರುತ್ತಿದೆ.
ತಮ್ಮ ಸಚಿವ ಸ್ಥಾನಕ್ಕೆ ಕೇಂದ್ರ ಶಿಕ್ಷಣ ಸಚಿವರಾಗಿದ್ದಂತ ರಮೇಶ್ ಪೋಖ್ರಿಯಾಲ್ ಅವರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ, 43 ನೂತನ ಸಚಿವರು ಇಂದು ಮೋದಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಇದು ಅತ್ಯಂತ ಕಿರಿಯ ಕ್ಯಾಬಿನೆಟ್ ಆಗಿರುತ್ತದೆ. ಒಬಿಸಿಗಳು, ಎಸ್ಸಿಗಳು ಹಾಗೂ ಎಸ್ಟಿಗಳ ದಾಖಲೆಯ ಪ್ರಾತಿನಿಧ್ಯ, ಹೆಚ್ಚಿನ ಮಹಿಳಾ ಆಯ್ಕೆಗಳನ್ನು ಹೊಂದಿರುತ್ತದೆ. ಇಂದು ಸಂಜೆ 6 ಗಂಟೆಗೆ ಘೋಷಿಸಲಿರುವ ಹೊಸ ಸಚಿವ ಸಂಪುಟವು, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಪ್ರಾತಿನಿಧ್ಯದ ಬಗ್ಗೆ ವಿಶೇಷ ಗಮನ ಹರಿಸಲಿದೆ ಎಂದು ಮೂಲಗಳು ತಿಳಿಸಿವೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…