ಹೊಸದಿಲ್ಲಿ: ಕರ್ನಾಟಕ ರಾಜ್ಯದ ವಿವಿಧ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಕುರಿತು ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಹೊಸದಿಲ್ಲಿಯಲ್ಲಿ ಚರ್ಚೆ ನಡೆಸಿದರು.
ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ, ಕಾರವಾರದ ಮಾವಾಳಿ ಹಾಗೂ ಮಂಗಳೂರಿನ ಬೈಕಂಪಾಡಿಯಲ್ಲಿ ಸಂಯೋಜಿತ ಸೀ ಫುಡ್ ಪಾರ್ಕ್ ಯೋಜನೆಗಳು, ರಾಜ್ಯ ಕರಾವಳಿಯ 8 ಮೀನುಗಾರಿಕೆ ಬಂದರುಗಳ ಆಧುನೀಕರಣ ಹಾಗೂ 16 ಕಡೆಗಳಲ್ಲಿ ಮೀನುಗಾರಿಕೆ ತಾಣಗಳ ಉನ್ನತೀಕರಣ ಸೇರಿದಂತೆ ನಾನಾ ಯೋಜನೆಗಳಿಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಸಚಿವ ಕೋಟ ಚರ್ಚಿಸಿ, ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು.
ಯೋಜನಾ ವರದಿ ಪರಿಶೀಲಿಸಿದ ಸಚಿವರು, ಧನಾತ್ಮಕವಾಗಿ ಸ್ಪಂದಿಸಿ, ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನ ಮಾಡುವಂತೆ ಹಾಗೂ ಪ್ರಧಾನ ಮಂತ್ರಿಯವರ ಆತ್ಮ ನಿರ್ಭರ ಭಾರತ ಯೋಜನೆ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ RKVY ಮುಖಾಂತರ ಯೋಜನೆಗಳಿಗೆ ಅನುಮೋದನೆ ನೀಡಿ, ಅನುದಾನ ಮಂಜೂರು ಮಾಡುವ ಭರವಸೆ ನೀಡಿದರು. ಕರ್ನಾಟಕ ಮೀನುಗಾರಿಕೆ ಇಲಾಖೆ ನಿರ್ದೇಶಕರಾದ ರಾಮಾಚಾರಿ ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…