ಹೊಸದಿಲ್ಲಿ: ಕರ್ನಾಟಕ ರಾಜ್ಯದ ವಿವಿಧ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಕುರಿತು ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಹೊಸದಿಲ್ಲಿಯಲ್ಲಿ ಚರ್ಚೆ ನಡೆಸಿದರು.
ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ, ಕಾರವಾರದ ಮಾವಾಳಿ ಹಾಗೂ ಮಂಗಳೂರಿನ ಬೈಕಂಪಾಡಿಯಲ್ಲಿ ಸಂಯೋಜಿತ ಸೀ ಫುಡ್ ಪಾರ್ಕ್ ಯೋಜನೆಗಳು, ರಾಜ್ಯ ಕರಾವಳಿಯ 8 ಮೀನುಗಾರಿಕೆ ಬಂದರುಗಳ ಆಧುನೀಕರಣ ಹಾಗೂ 16 ಕಡೆಗಳಲ್ಲಿ ಮೀನುಗಾರಿಕೆ ತಾಣಗಳ ಉನ್ನತೀಕರಣ ಸೇರಿದಂತೆ ನಾನಾ ಯೋಜನೆಗಳಿಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಸಚಿವ ಕೋಟ ಚರ್ಚಿಸಿ, ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು.
ಯೋಜನಾ ವರದಿ ಪರಿಶೀಲಿಸಿದ ಸಚಿವರು, ಧನಾತ್ಮಕವಾಗಿ ಸ್ಪಂದಿಸಿ, ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನ ಮಾಡುವಂತೆ ಹಾಗೂ ಪ್ರಧಾನ ಮಂತ್ರಿಯವರ ಆತ್ಮ ನಿರ್ಭರ ಭಾರತ ಯೋಜನೆ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ RKVY ಮುಖಾಂತರ ಯೋಜನೆಗಳಿಗೆ ಅನುಮೋದನೆ ನೀಡಿ, ಅನುದಾನ ಮಂಜೂರು ಮಾಡುವ ಭರವಸೆ ನೀಡಿದರು. ಕರ್ನಾಟಕ ಮೀನುಗಾರಿಕೆ ಇಲಾಖೆ ನಿರ್ದೇಶಕರಾದ ರಾಮಾಚಾರಿ ಉಪಸ್ಥಿತರಿದ್ದರು.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…