ನವದೆಹಲಿ,:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಅಭೂತಪೂರ್ವ ಜಯ ಸಾಧಿಸಿದ್ದು, ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಗುರುವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಒಟ್ಟು 57 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಂಪುಟ ದರ್ಜೆ ಸಚಿವರಾಗಿ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಸದಾನಂದ ಗೌಡ, ನಿರ್ಮಲಾ ಸೀತಾರಾಮನ್, ರಾಮವಿಲಾಸ್ ಪಾಸ್ವಾನ್, ನರೇಂದ್ರ ಸಿಂಗ್ ತೋಮರ್, ರವಿಶಂಕರ್ ಪ್ರಸಾದ್, ಹರ್ಸಿಮ್ರತ್ ಕೌರ್, ತಾವರ್ ಚಂದ್ ಗೆಹ್ಲೋಟ್, ಎಸ್.ಜೈಶಂಕರ್, ರಮೇಶ್ ಪೋಖ್ರಿಯಾಲ್, ಅರ್ಜುನ್ ಮುಂಡಾ, ಸ್ಮೃತಿ ಇರಾನಿ, ಡಾ.ಹರ್ಷವರ್ಧನ್, ಪ್ರಕಾಶ್ ಜಾವ್ಡೇಕರ್, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಮುಖ್ತಾರ್ ಅಬ್ಬಾಸ್ ನಖ್ವಿ. ಪ್ರಹ್ಲಾದ್ ಜೋಷಿ, ಮಹೇಂದ್ರನಾಥ್ ಪಾಂಡೆ, ಅರವಿಂದ್ ಸಾವಂತ್, ಗಿರಿರಾಜ್ ಸಿಂಗ್, ಗಜೇಂದ್ರ ಸಿಂಗ್ ಶೇಖವಾತ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯ ಖಾತೆ ಸಚಿವರಾಗಿ ಫಗನ್ ಸಿಂಗ್ ಕುಲಸ್ತೆ, ಅಶ್ವಿನಿ ಚೌಬೆ, ಅರ್ಜುನ್ ರಾಮ್ ಮೇಘವಾಲ್, ವಿ.ಕೆ.ಸಿಂಗ್, ಕೃಷ್ಣಪಾಲ್ ಗುರ್ಜರ್, ರಾವ್ ಸಾಹೇಬ್ ದಾನವೆ ರಾವ್, ಕಿಶನ್ ರೆಡ್ಡಿ, ಪುರುಷೋತ್ತಮ ರುಪಾಲಾ, ರಾಮದಾಸ್ ಅಠಾವಳೆ, ಸಾಧ್ವಿ ನಿರಂಜನ್ ಜ್ಯೋತಿ, ಬಾಬುಲ್ ಸುಪ್ರಿಯೋ, ಸಂಜೀವ್ ಬಲಿಯಾನ್, ಸಂಜಯ್ ಧೋತ್ರೆ, ಅನುರಾಗ್ ಠಾಕೂರ್, ಸುರೇಶ್ ಅಂಗಡಿ, ನಿತ್ಯಾನಂದ್ ರಾಯ್, ರತನ್ ಲಾಲ್ ಕಟಾರಿಯಾ, ವಿ.ಮುರಳೀಧರನ್, ರೇಣುಕಾ ಸಿಂಗ್, ಸೋಮ್ ಪ್ರಕಾಶ್, ರಾಮೇಶ್ವರ್ ತೇಲಿ, ಪ್ರತಾಪ್ ಸಾರಂಗಿ, ಕೈಲಾಶ್ ಚೌಧರಿ, ದೆಬೊಶ್ರೀ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸ್ವತಂತ್ರ ಖಾತೆ ಸಚಿವರಾಗಿ ಸಂತೋಷ್ ಕುಮಾರ್ ಗಂಗ್ವಾರ್, ಇಂದ್ರಜಿತ್ ಸಿಂಗ್, ಶ್ರೀ ಪಾದ್ ಎಸ್ ನಾಯಕ್, ಜಿತೇಂದ್ರ ಸಿಂಗ್, ಕಿರಣ್ ರಿಜಿಜು, ಪ್ರಹ್ಲಾದ್ ಸಿಂಗ್ ಪಟೇಲ್, ರಾಜ್ಕುಮಾರ್ ಸಿಂಗ್, ಹರ್ದೀಪ್ ಸಿಂಗ್ ಪುರಿ, ಮನಸುಖ್ ಮಾಂಡವ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮೇ 30ರಂದು ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ 7 ಗಂಟೆ ನಂತರ ನಡೆದ ಸಮಾರಂಭದಲ್ಲಿ ನರೇಂದ್ರ ದಾಮೋದರ್ ದಾಸ್ ಮೋದಿ ಅವರು 2ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಬಾರಿ 8 ಸಾವಿರಕ್ಕೂ ಹೆಚ್ಚು ಆಹ್ವಾನಿತ ಅತಿಥಿಗಳು ಈ ಶುಭ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…