ನವದೆಹಲಿ :ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಬಳಿ ಇರುವ ಹೆಚ್ಚುವರಿ ಬಂಡವಾಳದಲ್ಲಿನ ₹ 1.76 ಲಕ್ಷ ಕೋಟಿ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲು ಸಮ್ಮತಿಸಿದೆ.
ವಿತ್ತೀಯ ಕೊರತೆ ಹೆಚ್ಚದಂತೆ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರಕಾರ ಆರ್ಬಿಐ ಜತೆ ಹೆಚ್ಚುವರಿ ನಿಧಿಯನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಿತ್ತು, ಈ ಕಾರಣಕ್ಕಾಗಿ ಆರ್ಬಿಐ ಈ ಕೆಲಸ ಮಾಡಿದೆ ಎನ್ನಲಾಗಿದೆ.
ಆರ್ಬಿಐನಲ್ಲಿನ ಹೆಚ್ಚುವರಿ ನಿಧಿಯ ವರ್ಗಾವಣೆಗೆ ಸಂಬಂಧಿಸಿದಂತೆ ಬಿಮಲ್ ಜಲನ್ ನೇತೃತ್ವದ ಸಮಿತಿಯನ್ನು ರಚಿಸಲಾಗಿತ್ತು. ನಿಧಿ ವರ್ಗಾವಣೆಗೆ ಸಮಿತಿ ಶಿಫಾರಸು ಮಾಡಿದ್ದು ಅದನ್ನು ಆರ್ಬಿಐ ಅಂಗೀಕರಿಸಿದೆ.
ಸದ್ಯ, 2018-19ರ ಹೆಚ್ಚುವರಿ ಮೀಸಲು ನಿಧಿಯಾಗಿ 1.23 ಲಕ್ಷ ಕೋಟಿ ರೂ. ಮತ್ತು ಪರಿಷ್ಕರಿಸಿದ ಆರ್ಥಿಕ ಬಂಡವಾಳ ರೂಪುರೇಷೆ ಅಡಿಯಲ್ಲಿ ಹೆಚ್ಚುವರಿಯಾಗಿರುವ 52,637 ಕೋಟಿ ರೂ. ಅನ್ನು ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಆರ್ಬಿಐನಿಂದ ಹೆಚ್ಚುವರಿ ಮೀಸಲು ನಿಧಿಯನ್ನು ಸರಕಾರಕ್ಕೆ ವರ್ಗಾವಣೆ ಮಾಡುವ ವಿಚಾರದಲ್ಲಿ ಕಳೆದ ವರ್ಷ ತೀವ್ರ ವಿವಾದ ಎದ್ದ ಅನಂತರದಲ್ಲಿ ಈ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪರಿಣತರ ಸಮಿತಿ ರಚಿಸಲಾಗಿತ್ತು. ಸಮಿತಿ ಶಿಫಾರಸಿನ ಮೇರೆಗೆ ಆರ್ಬಿಐ ಈ ನಿರ್ಧಾರ ಕೈಗೊಂಡಿದೆ. ಈ ಹಿಂದೆ ಊರ್ಜಿತ್ ಪಟೇಲ್ ಗವರ್ನರ್ ಆಗಿದ್ದಾಗ ಈ ವಿಚಾರ ತೀವ್ರ ಚರ್ಚೆಗೆ ಒಳಪಟ್ಟಿತ್ತು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…