Featured

ಕೇಂದ್ರ ಸರಕಾರದಿಂದ ನಾಡ ದೋಣಿ ಮೀನುಗಾರಿಕೆಗೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮಎಣ್ಣೆ ಬಿಡುಗಡೆ : ಯಶ್ ಪಾಲ್ ಸುವರ್ಣ ಅಭಿನಂದನೆ – Vishwanews24

ಕೇಂದ್ರ ಸರಕಾರದಿಂದ ನಾಡ ದೋಣಿ ಮೀನುಗಾರಿಕೆಗೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮಎಣ್ಣೆ ಬಿಡುಗಡೆ : ಯಶ್ ಪಾಲ್ ಸುವರ್ಣ ಅಭಿನಂದನೆ

ರಾಜ್ಯದ ಕರಾವಳಿ ಭಾಗದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಮೀನುಗಾರಿಕೆ ನಡೆಸಲು ಸಕಾಲದಲ್ಲಿ ಸೀಮೆ ಎಣ್ಣೆ ಹಂಚಿಕೆಯಾಗದೇ ಎದುರಿಸುತ್ತಿದ್ದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ 2022-23 ನೇ ಸಾಲಿನ 30 ಲಕ್ಷ ಲೀಟರ್ ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಜುಲೈ ತಿಂಗಳಿನಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ವತಿಯಿಂದ ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ನೇತೃತ್ವದಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ, ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆ ರಾಜ್ಯ ಸಚಿವರಾದ ಶ್ರೀ ಎಲ್ ಮುರುಗನ್ ರವಾರನ್ನು ಭೇಟಿಯಾಗಿ ನಾಡದೋಣಿ ಮೀನುಗಾರಿಕೆಗೆ ಸಮರ್ಪಕ ಸೀಮೆ ಎಣ್ಣೆ ಪೂರೈಕೆಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರ ಹೆಚ್ಚುವರಿ ಸೀಮೆ ಎಣ್ಣೆ ಬಿಡುಗಡೆ ಮಾಡುವ ಮೂಲಕ ಬಡ ಮೀನುಗಾರರ ಬಗ್ಗೆ ತಮ್ಮ ಕಾಳಜಿ ಮೆರೆದಿದೆ.
ನಾಡದೋಣಿ ಮೀನುಗಾರರ ಬಹುದಿನದ ಬೇಡಿಕೆಯಾದ ಸೀಮೆ ಎಣ್ಣೆ ಪೂರೈಕೆ ಸಮಸ್ಯೆಯ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಹೆಚ್ಚುವರಿ ಸೀಮೆ ಎಣ್ಣೆ ಬಿಡುಗಡೆ ಗೊಳಿಸುವಲ್ಲಿ ಸಹಕರಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಪೆಟ್ರೋಲಿಯಂ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ, ಮೀನುಗಾರಿಕೆ ಸಚಿವರಾದ ಪರ್ಶೋತ್ತಮ್ ರೂಪಾಲ, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಶಿವಮೊಗ್ಗ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ, ಮೀನುಗಾರಿಕೆ ಸಚಿವರಾದ ಶ್ರೀ ಅಂಗಾರ, ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago